ಗಿರಿರಾಜ್ ಸಿಂಗ್ 
ಪ್ರಧಾನ ಸುದ್ದಿ

ಜನಾಂಗೀಯ ಹೇಳಿಕೆ: ಮೋದಿ ಬುದ್ಧಿ ಹೇಳಿರುವುದನ್ನು ನಿರಾಕರಿಸಿದ ಗಿರಿರಾಜ್

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆದು ಬುದ್ಧಿವಾದ ಹೇಳಿದ್ದಾರೆ ಎಂಬ ವರದಿ ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಮೂಲಗಳ ಪ್ರಕಾರ ವಿರೋಧ ಪಕ್ಷಗಳು ಪ್ರತಿಭಟಿಸಿದ ಮೇಲೆ ಲೋಕಸಭೆಯಲ್ಲಿ ಗಿರಿರಾಜ್ ವಿಷಾದ ವ್ಯಕ್ತಪಡಿಸಿದ ನಂತರ ಮೋದಿ ಮತ್ತು ಗಿರಿರಾಜ್ ಅವರ ನಡುವೆ ಈ ಸಭೆ ನಡೆದಿದೆ ಎಂದು ತಿಳಿದುಬಂದಿದೆ. ಈ ಸಭೆಯ ಬಗ್ಗೆ ತಿಳಿದ ಮೂಲಗಳ ಪ್ರಕಾರ ಪಕ್ಷವನ್ನು ಮುಜುಗರಕ್ಕೀಡು ಮಾಡಿದ ಗಿರಿರಾಜ್ ಹೇಳಿಕೆ ಬಗ್ಗೆ ಮೋದಿ ತರಾಟೆಗೆ ತೆಗೆದುಕೊಂಡದ್ದಕ್ಕೆ ಗಿರಿರಾಜ್ ಗಳಗಳ ಅತ್ತರು ಎಂದು ತಿಳಿಸಿದ್ದಾರೆ.

"ರಾಜೀವ್ ಗಾಂಧಿ ಬಿಳಿ ಚರ್ಮದ ಮಹಿಳೆಯ ಬದಲು ನೈಜೀರಿಯಾದ ಮಹಿಳೆಯನ್ನು ಮದುವೆಯಾಗಿದ್ದರೆ ಕಾಂಗ್ರೆಸ್ ಅವರ (ಸೋನಿಯಾ) ನಾಯಕತ್ವವನ್ನು ಒಪ್ಪಿಕೊಳ್ಳುತ್ತಿತ್ತೇ" ಎಂದು ಪ್ರಶ್ನಿಸಿ ಸಿಂಗ್ ತೀವ್ರ ವಿವಾದಕ್ಕೆ ಗುರಿಯಾಗಿದ್ದರು.

ಆದರೆ ಈ ಭೇಟಿ ನಡೆದಿರುವ ಬಗ್ಗೆ ಸಿಂಗ್ ನಿರಾಕರಿಸಿದ್ದಾರೆ. ವರದಿಗಾರರು ಈ ಭೇಟಿಯ ಬಗ್ಗೆ ಪ್ರಶ್ನಿಸಿಡಾಗ "ಹಾಗೇನಿ ಇಲ್ಲಪ್ಪ" ಎಂದಿರುವ ಸಿಂಗ್ ಮೋದಿ ಅವರೆದುರು ಅತ್ತಿದ್ದನ್ನೂ ನಿರಾಕರಿಸಿದ್ದಾರೆ.

ಈ ವಿಷಯದ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ರಾಜನಾಥ ಸಿಂಗ್ "ಜಾತಿ ಜನಾಂಗದ ವಿರುದ್ಧ ನೀಡುವ ಹೇಳಿಕೆಯನ್ನು ಸಂಸತ್ತಿನ ಒಳಗಾಗಲಿ ಹೊರಗಾಗಲಿ ಸರ್ಕಾರ ಯಾವುದೇ ಕಾರಣಕ್ಕೂ ಮನ್ನಣೆ ನೀಡುವುದಿಲ್ಲ" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT