ನರೇಂದ್ರ ಮೋದಿ ಅವರೊಂದಿಗೆ ಕರ್ನಾಟಕದ ಕೇಂದ್ರ ಸಚಿವರ ನೇತೃತ್ವದ ಸಂಸದರ ನಿಯೋಗ 
ಪ್ರಧಾನ ಸುದ್ದಿ

ಕಾಯಕಯೋಗಿಗೆ ಶಿರಬಾಗಿ ನಮಿಸುವೆ: ಪ್ರಧಾನಿ ಮೋದಿ

ಕಾಯಕಯೋಗಿ ಬಸವೇಶ್ವರ ಜಯಂತಿ ಅಂಗವಾಗಿ ಬಸವೇಶ್ವರರ ಭಾವಚಿತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ...

ನವದೆಹಲಿ: ಕಾಯಕಯೋಗಿ ಬಸವೇಶ್ವರ ಜಯಂತಿ ಅಂಗವಾಗಿ ಬಸವೇಶ್ವರರ ಭಾವಚಿತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ಕೇಂದ್ರ ಸಚಿವರ ನೇತೃತ್ವದ ಸಂಸದರ ನಿಯೋಗವು ಸಲ್ಲಿಸಿತು.

ಸಂಸತ್ ಆವರಣದಲ್ಲಿರುವ ಬಸವೇಶ್ವರ ಪ್ರತಿಮೆಗೆ ಕೇಂದ್ರ ರಸಾಯನ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್, ಕಾನೂನು ಸಚಿವ ಸದಾನಂದಗೌಡ, ಮಧ್ಯಮ ಕೈಗಾರಿಕೆ ಸಚಿವ ಜಿ.ಎಂ.ಸಿದ್ದೇಶ್ವರ ಅವರು ಮಾಲಾರ್ರ್ಪಣೆ ಮಾಡಿ ಗೌರವ ಸಲ್ಲಿಸಿದರು.

ನಿಯೋಗದಲ್ಲಿ ಸಂಸದರಾದ ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ ಜೋಶಿ, ಪ್ರತಾಪ್ ಸಿಂಹ, ಪಿ.ಸಿ.ಗದ್ದಿಗೌಡರು, ನಳಿನ ಕುಮಾರ್ ಕಟೀಲ್, ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆ, ಸಂಗಣ್ಣ ಕರಡಿ, ಪಿ.ಸಿ ಮೋಹನ್, ಸುರೇಶ್ ಅಂಗಡಿ ಭಾಗವಹಿಸಿದ್ದರು.

ತಲೆಬಾಗಿ ನಮಿಸುತ್ತೇನೆ: ಕಾಯಕ ಯೋಗಿ ಬಸವಣ್ಣನವರಿಗೆ ನಾನು ತಲೆಬಾಗಿ ನಮಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಬಸವ ಜಯಂತಿ ಅಂಗವಾಗಿ ಶುಭ ಕೋರಿರುವ ಪ್ರಧಾನಿ, ಸಮಾಜ ಸುಧಾರಣೆ ಮತ್ತು ಸೇವೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟ ಬಸವಣ್ಣನವರಿಗೆ ಬಸವ ಜಯಂತಿಯಂದು ನಾನು ತಲೆಬಾಗಿ ನಮಿಸುತ್ತೇನೆ. ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT