ನರೇಂದ್ರ ಮೋದಿ ಅವರೊಂದಿಗೆ ಕರ್ನಾಟಕದ ಕೇಂದ್ರ ಸಚಿವರ ನೇತೃತ್ವದ ಸಂಸದರ ನಿಯೋಗ 
ಪ್ರಧಾನ ಸುದ್ದಿ

ಕಾಯಕಯೋಗಿಗೆ ಶಿರಬಾಗಿ ನಮಿಸುವೆ: ಪ್ರಧಾನಿ ಮೋದಿ

ಕಾಯಕಯೋಗಿ ಬಸವೇಶ್ವರ ಜಯಂತಿ ಅಂಗವಾಗಿ ಬಸವೇಶ್ವರರ ಭಾವಚಿತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ...

ನವದೆಹಲಿ: ಕಾಯಕಯೋಗಿ ಬಸವೇಶ್ವರ ಜಯಂತಿ ಅಂಗವಾಗಿ ಬಸವೇಶ್ವರರ ಭಾವಚಿತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ಕೇಂದ್ರ ಸಚಿವರ ನೇತೃತ್ವದ ಸಂಸದರ ನಿಯೋಗವು ಸಲ್ಲಿಸಿತು.

ಸಂಸತ್ ಆವರಣದಲ್ಲಿರುವ ಬಸವೇಶ್ವರ ಪ್ರತಿಮೆಗೆ ಕೇಂದ್ರ ರಸಾಯನ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್, ಕಾನೂನು ಸಚಿವ ಸದಾನಂದಗೌಡ, ಮಧ್ಯಮ ಕೈಗಾರಿಕೆ ಸಚಿವ ಜಿ.ಎಂ.ಸಿದ್ದೇಶ್ವರ ಅವರು ಮಾಲಾರ್ರ್ಪಣೆ ಮಾಡಿ ಗೌರವ ಸಲ್ಲಿಸಿದರು.

ನಿಯೋಗದಲ್ಲಿ ಸಂಸದರಾದ ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ ಜೋಶಿ, ಪ್ರತಾಪ್ ಸಿಂಹ, ಪಿ.ಸಿ.ಗದ್ದಿಗೌಡರು, ನಳಿನ ಕುಮಾರ್ ಕಟೀಲ್, ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆ, ಸಂಗಣ್ಣ ಕರಡಿ, ಪಿ.ಸಿ ಮೋಹನ್, ಸುರೇಶ್ ಅಂಗಡಿ ಭಾಗವಹಿಸಿದ್ದರು.

ತಲೆಬಾಗಿ ನಮಿಸುತ್ತೇನೆ: ಕಾಯಕ ಯೋಗಿ ಬಸವಣ್ಣನವರಿಗೆ ನಾನು ತಲೆಬಾಗಿ ನಮಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಬಸವ ಜಯಂತಿ ಅಂಗವಾಗಿ ಶುಭ ಕೋರಿರುವ ಪ್ರಧಾನಿ, ಸಮಾಜ ಸುಧಾರಣೆ ಮತ್ತು ಸೇವೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟ ಬಸವಣ್ಣನವರಿಗೆ ಬಸವ ಜಯಂತಿಯಂದು ನಾನು ತಲೆಬಾಗಿ ನಮಿಸುತ್ತೇನೆ. ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

SCROLL FOR NEXT