ಕರ್ನಾಟಕ ಹೈ ಕೋರ್ಟ್ 
ಪ್ರಧಾನ ಸುದ್ದಿ

ಬಿಬಿಎಂಪಿ ಚುನಾವಣೆ: ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ರದ್ದು

ಮೇ 30ರೊಳಗೆ ಬೃಹತ್ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಬೇಕು ಎಂಬ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಶುಕ್ರವಾರ ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿ....

ಬೆಂಗಳೂರು: ಮೇ 30ರೊಳಗೆ ಬೃಹತ್ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಬೇಕು ಎಂಬ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಶುಕ್ರವಾರ ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿ ತೀರ್ಪು ನೀಡಿದೆ. ಇದರಿಂದ ಸರ್ಕಾರಕ್ಕೆ ಚುನಾವಣೆ ನಡೆಸಲು ಆರು ತಿಂಗಳ ಕಾಲವಕಾಶ ಸಿಕ್ಕಂತಾಗಿದೆ.

ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ರಾಮಮೋಹನ್ ರೆಡ್ಡಿ ಅವರನ್ನೊಳಗೊಂಡ ವಿಭಾಗೀಯ ಪೀಠ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ಸದ್ಯ ಬಿಬಿಎಂಪಿಯನ್ನು ಸೂಪರ್ ಸೀಡ್ ಮಾಡಲಾಗಿದೆ. 6 ತಿಂಗಳಿನಲ್ಲಿ ಚುನಾವಣೆ ನಡೆಸುತ್ತೇವೆ. ಆದ್ದರಿಂದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ವಾದ ಮಂಡಿಸಿದರು.

ಸದ್ಯ ಹೈಕೋರ್ಟ್ ವಿಭಾಗೀಯ ಪೀಠದ ಆದೇಶದಿಂದ ಸರ್ಕಾರಕ್ಕೆ ಸ್ಪಲ್ಪ ಸಮಾಧಾನ ತಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT