ಪ್ರಧಾನಮಂತ್ರಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಜನರ ಮೊರೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಮೋದಿ ಸೂಚನೆ

ನವದೆಹಲಿ ಸುತ್ತಮುತ್ತ ಪ್ರದೇಶಗಳಲ್ಲಿ ಭೂಮಿ ಕಂಪಿಸಿರುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರ ಮೊರೆಗೆ ಸ್ಪಂಧಿಸುವಂತೆ ಅಧಿಕಾರಿಗಳಿಗೆ ಮೋದಿ ಸೂಚನೆ...

ನವದೆಹಲಿ: ನವದೆಹಲಿ ಸುತ್ತಮುತ್ತ ಪ್ರದೇಶಗಳಲ್ಲಿ ಭೂಮಿ ಕಂಪಿಸಿರುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರ ಮೊರೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಮೋದಿ ಸೂಚನೆ ನೀಡಿದ್ದಾರೆ.

ಈ ಕುರಿತಂತೆ ಇಂದು ತಮ್ಮ ಟ್ವಿಟರ್ ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿರುವ ಮೋದಿ ಅವರು, ಭೂಕಂಪನ ಎಲ್ಲೆಲ್ಲಿ ಆಗಿದೆ ಎಂಬುದರ ಕುರಿತಂತೆ ಸ್ಪಷ್ಟ ಮಾಹಿತಿ ತಿಳಿದು ಬಂದಿಲ್ಲ. ಕ್ಷಣಕ್ಷಣದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಗೂ ಜನರ ಮೊರೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸ್ಪಷ್ಟಮಾಹಿತಿ ತಿಳಿದ ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ನವದೆಹಲಿಯ ಸುತ್ತಮುತ್ತಲಿನ ಪ್ರದೇಶವಾದ ಪಾಟ್ನಾ, ಅಸ್ಸಾಂ, ಜಾರ್ಖಾಂಡ್, ಕೋಲ್ಕತಾ, ಲಖನೌ ಸೇರಿದಂತೆ ಉತ್ತರ ಹಾಗೂ ಪೂರ್ವ ಭಾರತದ ಹಲವೆಡೆ  ಸುಮಾರು 10 ರಿಂದ 20 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿತ್ತು. ಭೂ ಕಂಪನದಿಂದಾಗಿ ಜನರು ತಮ್ಮ ಆತಂಕ ವ್ಯಕ್ತಪಡಿಸಿದ್ದು, ತಮ್ಮ ಮನೆ ಹಾಗೂ ಕಚೇರಿಯಿಂದ ಹೊರ ಬಂದಿದ್ದರು. ಇದೀಗ ದೆಹಲಿಯಲ್ಲಿ ಮತ್ತೆ ಮತ್ತೆ ಭೂಮಿ ಕಂಪಿಸುತ್ತಿದ್ದು, ಜನರ ಆತಂಕ ಮತ್ತಷ್ಟು ಹೆಚ್ಚಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT