ಶಂಕಿತ ಭಯೋತ್ಪಾದಕರು (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

17 ಮಂದಿ ಶಂಕಿತ ಸಿಮಿ ಉಗ್ರರ ಖುಲಾಸೆ

ಆರೋಪ ಸಾಬೀತಾಗದ ಹಿನ್ನಲೆಯಲ್ಲಿ 2008ರಲ್ಲಿ ಬಂಧಿತರಾಗಿದ್ದ 17 ಮಂದಿ ಶಂಕಿತ ಸಿಮಿ ಉಗ್ರರನ್ನು ಹುಬ್ಬಳ್ಳಿ ನ್ಯಾಯಾಲಯ ಖುಲಾಸೆಗೊಳಿಸಿದೆ.

ಹುಬ್ಬಳ್ಳಿ: ಆರೋಪ ಸಾಬೀತಾಗದ ಹಿನ್ನಲೆಯಲ್ಲಿ 17 ಶಂಕಿತ ಸಿಮಿ ಉಗ್ರರನ್ನು ಹುಬ್ಬಳ್ಳಿ ನ್ಯಾಯಾಲಯ ಖುಲಾಸೆಗೊಳಿಸಿದೆ.

2008ರ ಸಿಮಿ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ 17 ಶಂಕಿತ ಸಿಮಿ ಉಗ್ರರನ್ನು ಖುಲಾಸೆಗೊಳಿಸಿದೆ. ಸತತ 7 ವರ್ಷಗಳ ವಿಚಾರಣೆ ಹೊರತಾಗಿಯೂ ಆರೋಪಿಗಳ ಆರೋಪ ಸಾಬೀತು ಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಹಿನ್ನಲೆಯಲ್ಲಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ಗೋಪಾಲಕೃಷ್ಣ ಕೊಳ್ಳಿ ಅವರು 17 ಮಂದಿ ಶಂಕಿತ ಸಿಮಿ ಉಗ್ರರನ್ನು ಖುಲಾಸೆಗೊಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ಸಿಐಡಿ ಅಧಿಕಾರಿಗಳು ಸುಮಾರು 1624 ಪುಟಗಳ 3 ಚಾರ್ಜ್ ಶೀಟ್ ಅನ್ನು ದಾಖಲಿಸಿದ್ದರು. ಅಲ್ಲದೆ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳಾದ ಯಾಸಿನ್ ಭಟ್ಕಳ್, ಇಕ್ಬಾಲ್ ಭಟ್ಕಳ್, ರಿಯಾಜ್ ಭಟ್ಕಳ್ ಸೇರಿದಂತೆ ಒಟ್ಟು 20 ಮಂದಿ ಶಂಕಿತ ಉಗ್ರರ ವಿರುದ್ಧ ಆರೋಪ ಪಟ್ಟಿ ದಾಖಲಾಗಿತ್ತು. ನ್ಯಾಯಾಲಯ ಒಟ್ಟು 278 ಸಾಕ್ಷಿಗಳ ವಿಚಾರಣೆ ಕೂಡ ನಡೆಸಿತ್ತು. ಸತತ 7 ವರ್ಷಗಳ ಸುದೀರ್ಘ ವಿಚಾರಣೆಯ ನಂತರ ಹುಬ್ಬಳ್ಳಿ ಸೆಷನ್ಸ್ ನ್ಯಾಯಾಲಯ 17 ಮಂದಿ ಶಂಕಿತ ಉಗ್ರರನ್ನು ಖುಲಾಸೆಗೊಳಿಸಿದೆ.

ಬಾಕಿ ಉಳಿದಿರುವ ಯಾಸಿನ್ ಭಟ್ಕಳ್, ರಿಯಾಜ್ ಭಟ್ಕಳ್ ಮತ್ತು ಇಕ್ಬಾಲ್ ಭಟ್ಕಳ್ ವಿಚಾರಣೆ ಮಾತ್ರ ಬಾಕಿ ಉಳಿದಿದೆ. ಬೆಂಗಳೂರು ಮೂಲದ ಓರ್ವ ಟೆಕ್ಕಿ, ಕಿಮ್ಸ್ ನ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 17 ಮಂದಿ ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೆ ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಬಾಂಬ್ ಗಳು ಮತ್ತು ಡಿಟೋನೇಟರ್ ಗಳು ಪತ್ತೆಯಾಗಿದ್ದವು.

ಇದೀಗ ಸುದೀರ್ಘ ವಿಚಾರಣೆಯ ಬಳಿಕ ಆರೋಪ ಸಾಬೀತು ಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಹಿನ್ನಲೆಯಲ್ಲಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 17 ಆರೋಪಿಗಳನ್ನು ಖುಲಾಸೆಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!