ಯೋಗ ಗುರು ರಾಮ್ ದೇವ್ 
ಪ್ರಧಾನ ಸುದ್ದಿ

ರಾಮದೇವ್ 'ಪುತ್ರ ಸಂತಾನ' ಔಷಧಕ್ಕೆ ರಾಜ್ಯಸಭೆಯಲ್ಲಿ ವಿರೋಧ

ಯೋಗ ಗುರು ರಾಮ್ ದೇವ್ ಅವರ ದಿವ್ಯ ಫಾರ್ಮಸಿ ಮಾರಾಟ ಮಾಡುವ "ದಿವ್ಯ ಪುತ್ರಜೀವಕ್ ಬೀಜ" ಔಷಧಿ ರಾಜ್ಯಸಭೆಯಲ್ಲಿ ತೀವ್ರ ವಾಗ್ವಾದಕ್ಕೆ

ನವದೆಹಲಿ: ಯೋಗ ಗುರು ರಾಮ್ ದೇವ್ ಅವರ ದಿವ್ಯ ಫಾರ್ಮಸಿ ಮಾರಾಟ ಮಾಡುವ "ದಿವ್ಯ ಪುತ್ರಜೀವಕ್ ಬೀಜ" ಔಷಧಿ ರಾಜ್ಯಸಭೆಯಲ್ಲಿ ತೀವ್ರ ವಾಗ್ವಾದಕ್ಕೆ ಎಡೆಮಾಡಿಕೊಟ್ಟಿದೆ.

ಜನತಾದಳ ಸಂಯುಕ್ತ ಪಕ್ಷದ ಕೆ ಸಿ ತ್ಯಾಗಿ ಅವರು ದಿವ್ಯಾ ಫಾರ್ಮಸಿ ಗಂಡು ಮಗು ಸಂತಾನವನ್ನು ಭರವಸೆ ನೀಡುವ ಔಷಧಿಯನ್ನು ಮಾರುತ್ತಿದೆ ಎಂದು ಆರೋಪಿಸಿದ್ದಾರೆ.

ಇಂತಹ ಔಷದವನ್ನು ಮಾರುವ ಯೋಗ ಗುರು ರಾಮದೇವ್ ಅವರನ್ನು ಹರ್ಯಾಣ ಸರ್ಕಾರ "ಭೇಟಿ ಬಚಾವೋ" ಆಂದೋಲನಕ್ಕೆ ರಾಯಭಾರಿಯನ್ನಾಗಿ ಮಾಡಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಇದಕ್ಕೆ ಧ್ವನಿಗೂಡಿಸಿದ ವಿಪಕ್ಷದ ಹಲವು ಸದಸ್ಯರು ದಿವ್ಯಾ ಫಾರ್ಮಸಿಯ ವಿರುದ್ಧ ತನಿಖೆ ನಡೆಸಲು ಆಗ್ರಹಿಸಿದ್ದಾರೆ. ಈ ಔಷಧಿಯನ್ನು ನಿಷೇಧಿಸುವಂತೆ ಸಮಾಜವಾದಿ ಪಕ್ಷದ ಜಯಾ ಬಚ್ಚನ್ ಆಗ್ರಹಿಸಿದ್ದಾರೆ.

ಇಂತಹ ಔಷಧಗಳು ಗೊಡ್ಡು ಸಂಪ್ರದಾಯವನ್ನು ಮೆರೆವುದಲ್ಲದೆ, ವೈಜ್ಞಾನಿಕ ಮನೋಧರ್ಮಕ್ಕೆ ವಿರುದ್ಧ ಎಂದು ಸಿಪಿಐ ಪಕ್ಷದ ಸೀತಾರಾಂ ಯೆಚೂರಿ ಹೇಳಿದ್ದಾರೆ. ತನಿಖೆ ನಡೆಯುವವರೆಗೆ ಈ ಔಷದಿ ಮಾರಾಟಕ್ಕೆ ನೀಡಿರುವ ಪರವಾನಗಿ ರದ್ದುಮಾಡುವಂತೆ ಕಾಂಗ್ರೆಸ್ ಪಕ್ಷದ ಗುಲಾಂ ನಬಿ ಆಜಾದ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!