ನಾಪತ್ತೆಯಾಗಿರುವ ಆರೋಪಿ ಭಾಸ್ಕರ 
ಪ್ರಧಾನ ಸುದ್ದಿ

ಪೊಲೀಸರಿಗೆ ಭಾಸ್ಕರ್ ಚಳ್ಳೆಹಣ್ಣು

ಲೋಕಾಯುಕ್ತ ಭ್ರಷ್ಟಾಚಾರದ ಮತ್ತೊಬ್ಬ ಆರೋಪಿ ಭಾಸ್ಕರ್‍ನ ಪತ್ತೆಗೆ ಎಸ್‍ಐಟಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಆತನಿಗಾಗಿ ಹೊರರಾಜ್ಯಗಳಲ್ಲೂ ಶೋಧ ನಡೆಸುತ್ತಿದ್ದಾರೆ...

ಬೆಂಗಳೂರು: ಲೋಕಾಯುಕ್ತ ಭ್ರಷ್ಟಾಚಾರದ ಮತ್ತೊಬ್ಬ ಆರೋಪಿ ಭಾಸ್ಕರ್‍ನ ಪತ್ತೆಗೆ ಎಸ್‍ಐಟಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಆತನಿಗಾಗಿ ಹೊರರಾಜ್ಯಗಳಲ್ಲೂ ಶೋಧ ನಡೆಸುತ್ತಿದ್ದಾರೆ.  ಆದರೂ ಆತ ಎಲ್ಲಿದ್ದಾನೆ ಎಂಬ ಬಗ್ಗೆ ಪೊಲೀಸರಿಗೆ ಸಣ್ಣ ಸುಳಿವೂ ಸಿಕ್ಕಿಲ್ಲ.

ಹಾಗಾಗಿ ಹೊರರಾಜ್ಯಗಳಲ್ಲಿ ಭಾಸ್ಕರ್ ಹುಡುಕಾಟ ನಡೆಸುತ್ತಿರುವ ಪೊಲೀಸರು ಬಂದ ದಾರಿಗೆ ಸುಂಕವಿಲ್ಲ ಎಂದು ಬರಿಗೈಲಿ ಹಿಂತಿರುಗುತಿದ್ದಾರೆ ಎನ್ನಲಾಗಿದೆ. ಹಿಂದೆ ಆತ ಹಲವು ಮೊಬೈಲ್  ಸಿಮ್ ಕಾರ್ಡ್ ಬಳಸಿದ್ದರೂ ಸದ್ಯ ಯಾವ ಸಿಮ್ ಕಾರ್ಡ್‍ನ್ನೂ ಬಳಸುತ್ತಿಲ್ಲ. ಈ ಹಿಂದೆ ಆ ಸಿಮ್ನಿಂದ ಹೊರ ಹೋಗಿರುವ ಹಾಗೂ ಒಳಬಂದಿರುವ ಕರೆಗಳನ್ನು ತಪಾಸಣೆ ನಡೆಸಿದ ಪೊಲೀಸರು ಆ  ಸ್ಥಳಗಳಿಗೆ ಹೋಗಿ ಬರಿಗೈಲಿ ವಾಪಾಸಾಗಿದ್ದಾರೆ.

ಆರೋಪಿಯು ತಾನು ಒಂದು ಸಿಮ್ ಬಳಸಿದ ನಂತರ ಮತ್ತೆ ಅದನ್ನು ಬಳಸಿಲ್ಲ. ಬೇರೆಯವರ ಮೊಬೈಲ್ ಫೋನ್‍ಗಳಿಂದ ಹಾಗೂ ಸಾರ್ವಜನಿಕ ಟೆಲಿಫೋನ್ ಬೂತ್‍ಗಳಿಂದ ತನಗೆ  ಬೇಕಾದವರಿಗೆ ಕರೆ ಮಾಡುತ್ತಿದ್ದಾನೆ. ಕರೆ ಮಾಡಿ ನಂತರ ಅಲ್ಲಿಂದ ಜಾಗ ಬದಲಿಸುತ್ತಿದ್ದಾನೆ. ಹಾಗಾಗಿ ಪೊಲೀಸರಿಗೆ ಆತ ಎಲ್ಲಿ ಅಡಗಿದ್ದಾನೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ  ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT