ಲಕ್ಷ್ಮಿಕಾಂತ್ 
ಪ್ರಧಾನ ಸುದ್ದಿ

ಇಸಿಸ್ ಉಗ್ರರು ನಮಗೆ ಯಾವುದೇ ತೊಂದರೆ ಕೊಟ್ಟಿಲ್ಲ: ಅಪಹರಣಕ್ಕೊಳಗಾಗಿದ್ದ ಲಕ್ಷ್ಮಿಕಾಂತ್

ನಮಗೆ ಲಿಬಿಯಾದಲ್ಲಿ ಯಾರೂ ಕೂಡ ತೊಂದರೆ ಕೊಡಲಿಲ್ಲ. ಇಸಿಸ್ ಉಗ್ರರು ನಮ್ಮನ್ನು ತುಂಬಾ ಗೌರವದಿಂದ ನೋಡಿಕೊಂಡರು ಎಂದು ಲಿಬಿಯಾದಲ್ಲಿ ಇಸಿಸ್...

ಹೈದರಾಬಾದ್: ನಮಗೆ ಲಿಬಿಯಾದಲ್ಲಿ ಯಾರೂ ಕೂಡ ತೊಂದರೆ ಕೊಡಲಿಲ್ಲ. ಇಸಿಸ್ ಉಗ್ರರು ನಮ್ಮನ್ನು ತುಂಬಾ ಗೌರವದಿಂದ ನೋಡಿಕೊಂಡರು ಎಂದು ಲಿಬಿಯಾದಲ್ಲಿ ಇಸಿಸ್ ಉಗ್ರರಿಂದ ಅಪರಹರಣಕ್ಕೊಳಗಾಗಿದ್ದ ರಾಯಚೂರಿನ ಪ್ರೊ.ಲಕ್ಷ್ಮಿಕಾಂತ್ ರಾಮಕೃಷ್ಣ ಅವರು ಮಂಗಳವಾರ ಹೇಳಿದ್ದಾರೆ.

ಲಿಬಿಯಾದಲ್ಲಿ ಪ್ರಾಧ್ಯಾಪಕರಾಗಿದ್ದ  ಲಕ್ಷ್ಮಿಕಾಂತ್ ಅವರು ಇಂದು ಭಾರತಕ್ಕೆ ಮರಳಿದ್ದು, ಹೈದರಾಬಾದ್‌ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮಗೆಲ್ಲರಿಗೂ ನನ್ನ ಧನ್ಯವಾದಗಳು ಎಂದರು.

ನಮ್ಮನ್ನು ಅಪಹರಿಸಿದ್ದ ಉಗ್ರರು ನಮ್ಮ ವಿದ್ಯಾರ್ಥಿಗಳಾಗಿದ್ದರು. ಹೀಗಾಗಿ ಅವರು ನಮಗೆ ಯಾವುದೇ ರೀತಿಯ ತೊಂದರೆ ನೀಡಿಲ್ಲ. ಯಾವುದೇ ತೊಂದರೆಯಾದರೆ ನಮಗೆ ತಿಳಿಸಿ ಎಂದಿದ್ದಾರೆ. ಅಲ್ಲದೆ ಭಾರತಕ್ಕೆ ಹೋದ ಮೇಲೆ ಮೆಸೇಜ್ ಮಾಡುವಂತೆ ತಿಳಿಸಿದ್ದಾರೆ ಎಂದು ಲಕ್ಷ್ಮಿಕಾಂತ್ ಹೇಳಿದ್ದಾರೆ.

ಇಸಿಸ್ ಉಗ್ರರು ನಮ್ಮನ್ನು ತುಂಬಾ ಗೌರವದಿಂದ ಕಂಡಿದ್ದಾರೆ. ಅಧ್ಯಾಪಕರ ಬಗ್ಗೆ ಅವರಿಗೆ ಅಪಾರ ಗೌರವವಿದೆ. ಹೀಗಾಗಿ ಅವರು ಉಳಿದ ಪ್ರಾಧ್ಯಪಕರ ಬಗ್ಗೆ ಚಿಂತಿಸಬೇಡಿ ಎಂದಿದ್ದರು ಎಂದು ಲಕ್ಷ್ಮಿಕಾಂತ್ ತಿಳಿಸಿದ್ದಾರೆ.

ಲಿಬಿಯಾದ ಟ್ರೈಪೋಲಿಯಾದ ಸಿರ್ತೆ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದ ನಾಲ್ವರು ಭಾರತೀಯರನ್ನು ಕಳೆದ ಗುರುವಾರ ಸಂಜೆ ಉಗ್ರರು ಅಪಹರಿಸಿದ್ದರು. ಬಳಿಕ ಕನ್ನಡಿಗರಾದ ಲಕ್ಷ್ಮಿಕಾಂತ್ ಹಾಗೂ ವಿಜಯ್ ಕುಮಾರ್ ಬಿಡುಗಡೆಯಾಗಿದ್ದು, ಸುರಕ್ಷಿತರಾಗಿ ದೇಶಕ್ಕೆ ಮರಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT