ಲಕ್ಷ್ಮಿಕಾಂತ್ 
ಪ್ರಧಾನ ಸುದ್ದಿ

ಇಸಿಸ್ ಉಗ್ರರು ನಮಗೆ ಯಾವುದೇ ತೊಂದರೆ ಕೊಟ್ಟಿಲ್ಲ: ಅಪಹರಣಕ್ಕೊಳಗಾಗಿದ್ದ ಲಕ್ಷ್ಮಿಕಾಂತ್

ನಮಗೆ ಲಿಬಿಯಾದಲ್ಲಿ ಯಾರೂ ಕೂಡ ತೊಂದರೆ ಕೊಡಲಿಲ್ಲ. ಇಸಿಸ್ ಉಗ್ರರು ನಮ್ಮನ್ನು ತುಂಬಾ ಗೌರವದಿಂದ ನೋಡಿಕೊಂಡರು ಎಂದು ಲಿಬಿಯಾದಲ್ಲಿ ಇಸಿಸ್...

ಹೈದರಾಬಾದ್: ನಮಗೆ ಲಿಬಿಯಾದಲ್ಲಿ ಯಾರೂ ಕೂಡ ತೊಂದರೆ ಕೊಡಲಿಲ್ಲ. ಇಸಿಸ್ ಉಗ್ರರು ನಮ್ಮನ್ನು ತುಂಬಾ ಗೌರವದಿಂದ ನೋಡಿಕೊಂಡರು ಎಂದು ಲಿಬಿಯಾದಲ್ಲಿ ಇಸಿಸ್ ಉಗ್ರರಿಂದ ಅಪರಹರಣಕ್ಕೊಳಗಾಗಿದ್ದ ರಾಯಚೂರಿನ ಪ್ರೊ.ಲಕ್ಷ್ಮಿಕಾಂತ್ ರಾಮಕೃಷ್ಣ ಅವರು ಮಂಗಳವಾರ ಹೇಳಿದ್ದಾರೆ.

ಲಿಬಿಯಾದಲ್ಲಿ ಪ್ರಾಧ್ಯಾಪಕರಾಗಿದ್ದ  ಲಕ್ಷ್ಮಿಕಾಂತ್ ಅವರು ಇಂದು ಭಾರತಕ್ಕೆ ಮರಳಿದ್ದು, ಹೈದರಾಬಾದ್‌ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮಗೆಲ್ಲರಿಗೂ ನನ್ನ ಧನ್ಯವಾದಗಳು ಎಂದರು.

ನಮ್ಮನ್ನು ಅಪಹರಿಸಿದ್ದ ಉಗ್ರರು ನಮ್ಮ ವಿದ್ಯಾರ್ಥಿಗಳಾಗಿದ್ದರು. ಹೀಗಾಗಿ ಅವರು ನಮಗೆ ಯಾವುದೇ ರೀತಿಯ ತೊಂದರೆ ನೀಡಿಲ್ಲ. ಯಾವುದೇ ತೊಂದರೆಯಾದರೆ ನಮಗೆ ತಿಳಿಸಿ ಎಂದಿದ್ದಾರೆ. ಅಲ್ಲದೆ ಭಾರತಕ್ಕೆ ಹೋದ ಮೇಲೆ ಮೆಸೇಜ್ ಮಾಡುವಂತೆ ತಿಳಿಸಿದ್ದಾರೆ ಎಂದು ಲಕ್ಷ್ಮಿಕಾಂತ್ ಹೇಳಿದ್ದಾರೆ.

ಇಸಿಸ್ ಉಗ್ರರು ನಮ್ಮನ್ನು ತುಂಬಾ ಗೌರವದಿಂದ ಕಂಡಿದ್ದಾರೆ. ಅಧ್ಯಾಪಕರ ಬಗ್ಗೆ ಅವರಿಗೆ ಅಪಾರ ಗೌರವವಿದೆ. ಹೀಗಾಗಿ ಅವರು ಉಳಿದ ಪ್ರಾಧ್ಯಪಕರ ಬಗ್ಗೆ ಚಿಂತಿಸಬೇಡಿ ಎಂದಿದ್ದರು ಎಂದು ಲಕ್ಷ್ಮಿಕಾಂತ್ ತಿಳಿಸಿದ್ದಾರೆ.

ಲಿಬಿಯಾದ ಟ್ರೈಪೋಲಿಯಾದ ಸಿರ್ತೆ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದ ನಾಲ್ವರು ಭಾರತೀಯರನ್ನು ಕಳೆದ ಗುರುವಾರ ಸಂಜೆ ಉಗ್ರರು ಅಪಹರಿಸಿದ್ದರು. ಬಳಿಕ ಕನ್ನಡಿಗರಾದ ಲಕ್ಷ್ಮಿಕಾಂತ್ ಹಾಗೂ ವಿಜಯ್ ಕುಮಾರ್ ಬಿಡುಗಡೆಯಾಗಿದ್ದು, ಸುರಕ್ಷಿತರಾಗಿ ದೇಶಕ್ಕೆ ಮರಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT