ಬಿಜೆಪಿ ಮುಖಂಡ ನಟ ಶತ್ರುಘನ್ ಸಿನ್ಹ 
ಪ್ರಧಾನ ಸುದ್ದಿ

ಕಾಂಗ್ರೆಸ್ ಸಂಸದರ ಅಮಾನತು: ಅಸಮಧಾನ ವ್ಯಕ್ತಪಡಿಸಿದ ಶತ್ರುಘನ್ ಸಿನ್ಹ

೨೫ ಜನ ಕಾಂಗ್ರೆಸ್ ಸಂಸದರನ್ನು ಲೋಕಸಭಾ ಸ್ಪೀಕರ್ ಸುಮಿತ್ರ ಮಹಾಜನ್ ಅಮಾನತು ಮಾಡಿರುವುದರ ಬಗ್ಗೆ ಅಸಮಧಾನ ಇದೆ ಎಂದು ಬಿಜೆಪಿ ಮುಖಂಡನಾಗಿರುವ

ನವದೆಹಲಿ: ೨೫ ಜನ ಕಾಂಗ್ರೆಸ್ ಸಂಸದರನ್ನು ಲೋಕಸಭಾ ಸ್ಪೀಕರ್ ಸುಮಿತ್ರ ಮಹಾಜನ್ ಅಮಾನತು ಮಾಡಿರುವುದರ ಬಗ್ಗೆ ಅಸಮಧಾನ ಇದೆ ಎಂದು ಬಿಜೆಪಿ ಮುಖಂಡನಾಗಿರುವ ನಟ ಶತ್ರುಘನ್ ಸಿನ್ಹ ಹೇಳಿದ್ದಾರೆ.

"ಲೋಕಸಭೆಯ ಕಲಾಪದಲ್ಲಿ ಇರದ ಒಬ್ಬರನ್ನು ಸೇರಿದಂತೆ ಕಾಂಗ್ರೆಸ್ಸಿನ ೨೫ ಸಂಸದರನ್ನು ಅಮಾನತು ಮಾಡಿರುವ ಬೆಳವಣಿಗೆಯಿಂದ ಅಸಮಾಧಾನವಾಗಿದೆ" ಎಂದು ಸಿನ್ಹ ಟ್ವೀಟ್ ಮಾಡಿದ್ದಾರೆ.

"ಈಗ ಅಥವಾ ಮುಂದೆ ಒಳ್ಳೆಯ ಚಿಂತನೆ ಉಳಿಯಬೇಕು" ಎಂದು ಕೂಡ ಅವರು ಹೇಳಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ರಾಜೀನಾಮೆ ಕೋರಿ ಕಾಂಗ್ರೆಸ್ ಪಕ್ಷ ಸಂಸತ್ ಕಲಾಪಗಳಿಗೆ ಅಡ್ಡಿಪಡಿಸಿತ್ತು. ಇದನ್ನು ಸರ್ಕಾರ ತಿರಸ್ಕರಿಸಿತ್ತು.

"ಬೇಕಂತಲೇ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ" ಎಂದು ದೂರಿ ಸೋಮವಾರ ಐದು ದಿನಗಳವರೆಗೆ ೨೫ ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಅಮಾನತುಗೊಳಿಸಿದ್ದರು. ಕಾಂಗ್ರೆಸ್ ಈ ಅಮಾನತಿನ ವಿರುದ್ಧ ಇತರ ಪಕ್ಷಗಳೊಂದಿಗೆ ಸಂಸತ್ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

SCROLL FOR NEXT