ಬಿಜೆಪಿ ಮುಖಂಡ ನಟ ಶತ್ರುಘನ್ ಸಿನ್ಹ 
ಪ್ರಧಾನ ಸುದ್ದಿ

ಕಾಂಗ್ರೆಸ್ ಸಂಸದರ ಅಮಾನತು: ಅಸಮಧಾನ ವ್ಯಕ್ತಪಡಿಸಿದ ಶತ್ರುಘನ್ ಸಿನ್ಹ

೨೫ ಜನ ಕಾಂಗ್ರೆಸ್ ಸಂಸದರನ್ನು ಲೋಕಸಭಾ ಸ್ಪೀಕರ್ ಸುಮಿತ್ರ ಮಹಾಜನ್ ಅಮಾನತು ಮಾಡಿರುವುದರ ಬಗ್ಗೆ ಅಸಮಧಾನ ಇದೆ ಎಂದು ಬಿಜೆಪಿ ಮುಖಂಡನಾಗಿರುವ

ನವದೆಹಲಿ: ೨೫ ಜನ ಕಾಂಗ್ರೆಸ್ ಸಂಸದರನ್ನು ಲೋಕಸಭಾ ಸ್ಪೀಕರ್ ಸುಮಿತ್ರ ಮಹಾಜನ್ ಅಮಾನತು ಮಾಡಿರುವುದರ ಬಗ್ಗೆ ಅಸಮಧಾನ ಇದೆ ಎಂದು ಬಿಜೆಪಿ ಮುಖಂಡನಾಗಿರುವ ನಟ ಶತ್ರುಘನ್ ಸಿನ್ಹ ಹೇಳಿದ್ದಾರೆ.

"ಲೋಕಸಭೆಯ ಕಲಾಪದಲ್ಲಿ ಇರದ ಒಬ್ಬರನ್ನು ಸೇರಿದಂತೆ ಕಾಂಗ್ರೆಸ್ಸಿನ ೨೫ ಸಂಸದರನ್ನು ಅಮಾನತು ಮಾಡಿರುವ ಬೆಳವಣಿಗೆಯಿಂದ ಅಸಮಾಧಾನವಾಗಿದೆ" ಎಂದು ಸಿನ್ಹ ಟ್ವೀಟ್ ಮಾಡಿದ್ದಾರೆ.

"ಈಗ ಅಥವಾ ಮುಂದೆ ಒಳ್ಳೆಯ ಚಿಂತನೆ ಉಳಿಯಬೇಕು" ಎಂದು ಕೂಡ ಅವರು ಹೇಳಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ರಾಜೀನಾಮೆ ಕೋರಿ ಕಾಂಗ್ರೆಸ್ ಪಕ್ಷ ಸಂಸತ್ ಕಲಾಪಗಳಿಗೆ ಅಡ್ಡಿಪಡಿಸಿತ್ತು. ಇದನ್ನು ಸರ್ಕಾರ ತಿರಸ್ಕರಿಸಿತ್ತು.

"ಬೇಕಂತಲೇ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ" ಎಂದು ದೂರಿ ಸೋಮವಾರ ಐದು ದಿನಗಳವರೆಗೆ ೨೫ ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಅಮಾನತುಗೊಳಿಸಿದ್ದರು. ಕಾಂಗ್ರೆಸ್ ಈ ಅಮಾನತಿನ ವಿರುದ್ಧ ಇತರ ಪಕ್ಷಗಳೊಂದಿಗೆ ಸಂಸತ್ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT