ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾಶ್ಮೀರದಲ್ಲಿ ಲಷ್ಕರ್ ಎ ತೈಬಾ ಜಿಲ್ಲಾ ಕಮ್ಯಾಂಡರ್ ಹತ್ಯೆ

ಲಷ್ಕರ್ ಎ ತೈಬಾ ಉಗ್ರಗಾಮಿ ಸಂಘಟನೆಯ ಜಿಲ್ಲಾ ಕಮ್ಯಾಂಡರ್ ನನ್ನು ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿನ ಕಾಳಗದಲ್ಲಿ ಹತ್ಯೆ ಮಾಡಲಾಗಿದೆ ಎಂದು

ಶ್ರೀನಗರ: ಲಷ್ಕರ್ ಎ ತೈಬಾ ಉಗ್ರಗಾಮಿ ಸಂಘಟನೆಯ ಜಿಲ್ಲಾ ಕಮ್ಯಾಂಡರ್ ನನ್ನು ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿನ ಕಾಳಗದಲ್ಲಿ ಹತ್ಯೆ ಮಾಡಲಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

"ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ, ಭದ್ರತಾ ಪಡೆಗಳು ಪುಲ್ವಾಮಾದ ಅಸ್ತಾನ್ ಮೊಹಲ್ಲ (ಕಾಕಪೋರ) ಸುತ್ತುವರೆದಿದ್ದರು. ಅಡಗಿದ್ದ ಭಯೋತ್ಪಾದಕರಿಗೆ ಸವಾಲೊಡ್ಡಿದ ನಂತರ ಉಗ್ರಗಾಮಿಗಳು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದಾಗ, ಇದಕ್ಕೆ ಪ್ರತಿಕ್ರಿಯಿಸಿದ ಭದ್ರತಾ ಪಡೆಗಳು ಮುಹಮ್ಮದ್ ಅಪ್ಜಲ್ ಅಲಿಯಾಸ್ ತಾಲಿಬ್ ನನ್ನು ಹತ್ಯೆಗೈದಿವೆ" ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

"ಹತ್ಯೆಯಾದ ಭಯೋತ್ಪಾದಕ ಕಳೆದ ವರ್ಷದಿಂದಲೂ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಮತ್ತು ಭದ್ರತಾ ಪಡೆಗಳ ವಾಂಟೆಡ್ ಪಟ್ಟಿಯಲ್ಲಿದ್ದ" ಎಂದು ಅಧಿಕಾರಿ ತಿಳಿಸಿದ್ದಾರೆ.

ಭದ್ರತಾ ಪಡೆಗಳು ಎಲ್ ಇ ಟಿ ಜಿಲ್ಲ ಕಮ್ಯಾಂಡರ್ ನನ್ನು ಹತ್ಯೆ ಮಾಡಿದ್ದಾರೆ ಎಂಬ ವರದಿ ಹೊರಬಿದ್ದ ನಂತರ ಆ ಪ್ರದೇಶದಲ್ಲಿ ಜನರ ಗುಂಪು ಭದ್ರತಾ ಪಡೆಗಳ ವಿರುದ್ಧ ಕಲ್ಲು ತೂರಿದ ವರದಿಗಳು ಕೇಳಿಬಂದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT