ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಮೇಕೆದಾಟು ಯೋಜನೆ ಪೂರ್ಣಗೊಳಿಸಿಯೇ ತೀರುವೆವು: ಸಿದ್ದರಾಮಯ್ಯ

ಕರ್ನಾಟಕದ ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಮೇಕೆದಾಟು ಯೋಜನೆಯನ್ನು ಪೂರ್ಣಗೊಳಿಸಿಯೇ ತೀರುತ್ತೇವೆಂದು...

ಬೆಂಗಳೂರು: ಕರ್ನಾಟಕದ ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಮೇಕೆದಾಟು ಯೋಜನೆಯನ್ನು ಪೂರ್ಣಗೊಳಿಸಿಯೇ ತೀರುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿಂದು ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ 15 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೇಕೆದಾಟು ಯೋಜನೆ ವಿಷಯವನ್ನು ಜಯಲಲಿತಾ ಅವರು ರಾಜಕೀಯಗೊಳಿಸುತ್ತಿದ್ದಾರೆ. ಯೋಜನೆ ಅನುಷ್ಠಾನಕ್ಕೆ ಬರಲು ಯಾವುದೇ ಕಾನೂನು ತೊಡಕುಗಳಿಲ್ಲ. ಕಾವೇರಿ ನ್ಯಾಯಾಧೀಕರಣ ನೀಡಿರುವ ತೀರ್ಪನ್ನು ರಾಜ್ಯ ಉಲ್ಲಂಘಿಸುತ್ತಿಲ್ಲ ಅನಗತ್ಯವಾಗಿ ತಮಿಳುನಾಡು ಮುಖ್ಯಮಂತ್ರಿ ಅವರು ವಿಷಯವನ್ನು ರಾಜಕೀಕರಣಗೊಳಿಸಿ ಮತ್ತೆ ಕ್ಯಾತೆ ತೆಗೆಯಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ತಮಿಳುನಾಡು ಪ್ರವಾಸ ಕೈಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನಿನ್ನೆ ಭೋಜನಕೂಟಕ್ಕೆ ಆಹ್ವಾನಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು, ಮಾತುಕತೆ ವೇಳೆ ಪ್ರಧಾನಿಯೊಂದಿಗೆ ಕರ್ನಾಟಕದ ಮೇಕೆದಾಟು ಯೋಜನೆ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಕಾವೇರಿ ನ್ಯಾಯಾಧೀಕರಣದ ಅಂತಿಮ ಆದೇಶಕ್ಕೆ ಈ ಮೇಕೆದಾಟು ಯೋಜನೆ ವಿರೋಧವಾಗಿದೆ ಎಂದು ದೂರು ನೀಡಿದ್ದಾರೆ. ಅಲ್ಲದೆ, ತಮಿಳುನಾಡು ಸರಕಾರದ ಸಹಕಾರವಿಲ್ಲದೇ, ಯೋಜನೆಯನ್ನು ಮುಂದುವರಿಸದಂತೆ ಕರ್ನಾಟಕಕ್ಕೆ ಸೂಚಿಸಬೇಕು. ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ನ್ಯಾಯಾಧೀಕರಣ ನೀಡಿದ ಅಂತಿಮ ಆದೇಶ ಜಾರಿಗೊಳಿಸಲು ಕಾವೇರಿ ನದಿ ನಿರ್ವಹಣಾ ಮಂಡಳಿಯೊಂದನ್ನು ರಚಿಸಬೇಕೆಂದು ಹೇಳೆ ಮೋದಿ ಅವರ ಕಿವಿಹಿಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಜಯಲಲಿತಾ ಅವರ ಈ ನಡಿಗೆಗೆ ತೀವ್ರ ಕೆಂಡಮಂಡಲವಾಗಿರುವ ಸಿದ್ದರಾಮಯ್ಯ ಅವರು ಇದೀಗ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಲು ಅದಾವುದೇ ತೊಂದರೆ ಬಂದರು ಸರಿಯೇ ಯೋಜನೆಯನ್ನು ಅನುಷ್ಠಾನಕ್ಕೆ ತಂದೇ ತೀರುತ್ತೇವೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT