ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರು ರೈತರು 
ಪ್ರಧಾನ ಸುದ್ದಿ

ಕಳಸಾ ಬಂಡೂರಿ ಯೋಜನೆಗೆ ಆಗ್ರಹ: ನರಗುಂದ ಪಟ್ಟಣ ಮೂರು ದಿನ ಬಂದ್

ಕಳಸಾ ಬಂಡೂರಿ ಯೋಜನೆ ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಲವು ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದ್ದು, ಇಂದಿನಿಂದ ಮೂರು ದಿನಗಳ ನರಗುಂದ ಪಟ್ಟಣವನ್ನು ಬಂದ್ ಮಾಡುವಂತೆ ರೈತ ಸಂಘಟನೆಗಳು ಭಾನುವಾರ ಘೋಷಣೆ ಮಾಡಿದೆ...

ನರಗುಂದ (ಗದಗ): ಕಳಸಾ ಬಂಡೂರಿ ಯೋಜನೆ ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಲವು ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದ್ದು, ಇಂದಿನಿಂದ ಮೂರು ದಿನಗಳ ನರಗುಂದ ಪಟ್ಟಣವನ್ನು ಬಂದ್ ಮಾಡುವಂತೆ ರೈತ ಸಂಘಟನೆಗಳು ಭಾನುವಾರ ಘೋಷಣೆ ಮಾಡಿದೆ.

ರೈತರ ಸಂಘಟನೆಗಳ ಘೋಷಣೆಗೆ ಇದೀಗ ಪಟ್ಟಣದ ವರ್ತಕರ ಸಂಘ ಬೆಂಬಲ ಸೂಚಿಸಿದ್ದು, ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಮಹದಾಯಿ ಹಾಗೂ ಮಲಪ್ರಭಾ ನದಿ ಜೋಡಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಲೇ ಬಂದಿದೆ. ಅಲ್ಲದೆ, ಕಳೆದ 20 ದಿನಗಳಿಂದ ಶಾಂತಿಯುತ ಹೋರಾಟ ಮಾಡುತ್ತಿದ್ದು, ರೈತರ ಹೋರಾಟಕ್ಕೆ ಇದೀಗ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದಿರವುದರಿಂದ ರೈತ ಸಂಘಟನೆಗಳು ಕೆಂಡಾಮಂಡಲವಾಗಿದೆ. ಹೀಗಾಗಿ ಹೋರಾಟದ ಬಿಸಿ ಇದೀಗ ಪಟ್ಟಣದ ಸುತ್ತಮುತ್ತಲ ಗ್ರಾಮಗಳಿಗೂ ತಟ್ಟತೊಡಗಿದ್ದು, ನರಗುಂದ ಪಟ್ಟಣದಲ್ಲಿ ಮೂರು ದಿನಗಳ ಕಾಲ ಬಂದ್ ಆಚರಿಸಲಾಗುತ್ತಿದೆ.

ರೈತರ ಬಂದ್ ಕರೆಯಿಂದಾಗಿ ಈಗಾಗಲೇ ಸೂಕ್ತ ವ್ಯವಸ್ಥೆ ಕೈಗೊಂಡಿರುವ ಜಿಲ್ಲಾಡಳಿತವು ಅಹಿತಕರ ಘಟನೆ ನಡೆಯದಂತೆ ಸ್ಥಳದಂತೆ ಬಿಗಿಬಂದೋಬಸ್ತ್ ನ್ನು ನಿಯೋಜಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT