ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ: ಸಂಸತ್ ಕಲಾಪ ವ್ಯರ್ಥವಾಗಿದ್ದಕ್ಕೆ ವಿಷಾದ

ಯಾವುದೇ ಚರ್ಚೆ ಇಲ್ಲದೆ ಶೂನ್ಯ ಸಾಧನೆಯೊಂದಿಗೆ ಅಂತ್ಯಗೊಂಡ ಮುಂಗಾರು ಅಧಿವೇಶನದ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು,...

ನವದೆಹಲಿ: ಯಾವುದೇ ಚರ್ಚೆ ಇಲ್ಲದೆ ಶೂನ್ಯ ಸಾಧನೆಯೊಂದಿಗೆ ಅಂತ್ಯಗೊಂಡ ಮುಂಗಾರು ಅಧಿವೇಶನದ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮಹತ್ವದ ಚರ್ಚೆಗೆ ವೇದಿಕೆಯಾಗಬೇಕಿದ್ದ ಸಂಸತ್, ರಣರಂಗವಾಗಿ ಮಾರ್ಪಡುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

69ನೇ ಸ್ವಾತಂತ್ರ್ಯೋತ್ಸದ ಹಿನ್ನೆಲೆಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ಪ್ರಜಾಪ್ರಭುತ್ವ ಸಂಸ್ಥೆಗಳು ಆತಂಕದಲ್ಲಿದ್ದು, ಜನರು ತಮ್ಮ ರಾಜಕೀಯ ಪಕ್ಷಗಳ ಬಗ್ಗೆ ಗಂಭೀರ ಚಿಂತನೆ ಮಾಡುವ ಸಮಯ ಇದು ಎಂದಿದ್ದಾರೆ.

ಗಡಿಯಲ್ಲಿ ಹೆಚ್ಚುತ್ತಿರುವ ಉಗ್ರ ಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಣಬ್ ಮುಖರ್ಜಿ, ಭಾರತಕ್ಕೆ ಕೇಡು ತರುವಂಥ ಚಟುವಟಿಕೆಗಳು ಗಡಿಯಲ್ಲಿ ನಡೆಯುತ್ತಿಲ್ಲ ಎಂಬುದನ್ನು ನೆರೆ ರಾಷ್ಟ್ರಗಳು ಖಚಿತಪಡಿಸಬೇಕು ಎಂದರು.

ಭಾರತವನ್ನು ಉಗ್ರರು ಟಾರ್ಗೆಟ್ ಮಾಡಿದ್ದಾರೆ. ಭಯೋತ್ಪಾದನೆಗೆ ಯಾವುದೇ ಧರ್ಮ, ಸಿದ್ಧಾಂತಗಳ ಕಟ್ಟುಪಾಡುಗಳಿಲ್ಲ. ಹೀಗಾಗಿ ದೇಶಕ್ಕೆ ನುಸುಳುವ ಉಗ್ರರನ್ನು ತಡೆಯಲು ಶಕ್ತಿಯುತ ಅಸ್ತ್ರ ಬಳಸಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT