ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಪಾಕಿಸ್ತಾನ ಶೆಲ್ ದಾಳಿ; ಮೂವರು ನಾಗರಿಕರ ಸಾವು; ೨೦ ಜನಕ್ಕೆ ಗಾಯ

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಶನಿವಾರ ಭಾರತದ ಸ್ವಾತಂತ್ರ್ಯ ದಿನಾಚರಣೆಯಾದ ಇಂದು ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸಿದ್ದು

ಜಮ್ಮು: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಶನಿವಾರ ಭಾರತದ ಸ್ವಾತಂತ್ರ್ಯ ದಿನಾಚರಣೆಯಾದ ಇಂದು ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸಿದ್ದು ಮೂವರು ನಾಗರಿಕರು ಮೃತಪಟ್ಟು ೨೦ ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಮೆಂಧಾರ್ ಸೆಕ್ಟರ್ ನಲ್ಲಿ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಿಂದ ಮೂವರು ನಾಗರಿಕರು ಮೃತಪಟ್ಟಿದ್ದು, ೨೦ ಜನ ಗಾಯಗೊಂಡಿದ್ದಾರೆ" ಎಂದು ಜಮ್ಮು ವಿಭಾಗದ ಕಮಿಷನರ್ ಪವನ್ ಕೊತ್ವಾಲ್ ತಿಳಿಸಿದ್ದಾರೆ.

"ಗಾಯಗೊಂಡವರನ್ನು ಜಮ್ಮು ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸೇರಿಸಲು ನಾವು ಹೆಲಿಕ್ಯಾಪ್ಟರ್ ಗಳನ್ನು ಕಳುಹಿಸಿದ್ದೇವೆ ಮತ್ತು ತುರ್ತು ನಿಗಾ ಘಟಕವನ್ನು ಗಾಯಗೊಂಡವರನ್ನು ಸ್ವೀಕರಿಸಲು ಎಚ್ಚರಿಸಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

ಪೂಂಚ್ ಜಿಲ್ಲೆಯ ಮೆಂಧರ್, ಸೌಜಿಯಾನ್ ಮತ್ತು ಮಂಡಿ ಸೆಕ್ಟರ್ ಗಳ ಗಡಿ ನಿಯಂತ್ರಣಾ ರೇಖೆಯಲ್ಲಿ ಶನಿವಾರ ಬೆಳಗ್ಗೆಯಿಂದಲೇ ಪಾಕಿಸ್ತಾನ ಅಪ್ರಚೋದಿತ ಶೆಲ್ ದಾಳಿ ನಡೆಸಿದೆ. ಈ ಪ್ರದೇಶಗಳಲ್ಲಿ ಭಾರತೀಯ ಸೇನೆ ಸೂಕ್ತ ಉತ್ತರ ನೀಡಿದೆ ಎಂದು ಸೇನೆಯ ವಕ್ತಾರ ಮನೀಶ್ ಮೆಹ್ತಾ ತಿಳಿಸಿದ್ದಾರೆ.

"ಅವರು (ಪಾಕಿಸ್ತಾನ) ಈ ದಾಳಿಗೆ ೮೨ ಎಂ ಎಂ ಮಾರ್ಟರ್ ಗಳನ್ನು ಬಳಸಿದ್ದಾರೆ. ಬೆಳಗ್ಗೆ ಮೂರು ಘಂಟೆಯಿಂದಲೇ ಕದನ ವಿರಾಮ ಉಲ್ಲಂಘಿಸಿ ಶೆಲ್ ದಾಳಿ ನಡೆಸಿದ್ದು ಸುಮಾರು ೭:೩೦ ರ ಹೊತ್ತಿಗೆ ಈ ದಾಳಿ ನಿಂತಿದೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT