ಕಾಂಗ್ರೆಸ್ ಅಭ್ಯರ್ಥಿ ಯುವರಾಜ್, ಜೆಡಿಎಸ್ ಅಭ್ಯರ್ಥಿ ಹೇಮಲತಾ ಗೋಪಾಲಯ್ಯ, ಬಿಜೆಪಿ ಅಭ್ಯರ್ಥಿ ವಾಣಿಶ್ರೀ ವಿಶ್ವನಾಥ್ ಹಾಗೂ ಜೆಡಿಎಸ್ ಅಭ್ಯರ್ಥಿ, ಕ್ರಿಯಾ ಶೈಲಜಾ 
ಪ್ರಧಾನ ಸುದ್ದಿ

ಆಗರ್ಭ ಶ್ರೀಮಂತೆಯರು ಶಾಸಕರ ಈ ಪತ್ನಿಯರು

ಬಿಬಿಎಂಪಿ ಚುನಾವಣೆಗೆ ಶಾಸಕರು ತಮ್ಮ ಪತ್ನಿಯರನ್ನು ಕಣಕ್ಕಿಳಿಸಿ ಮತ್ತೊಂದು ದರ್ಜೆಯ ಅಧಿಕಾರವನ್ನು ಮನೆಯಲ್ಲೇ ಉಳಿಸಿಕೊಳ್ಳಲು ಬಯಸಿದ್ದಾರೆ...

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಶಾಸಕರು ತಮ್ಮ ಪತ್ನಿಯರನ್ನು ಕಣಕ್ಕಿಳಿಸಿ ಮತ್ತೊಂದು ದರ್ಜೆಯ ಅಧಿಕಾರವನ್ನು ಮನೆಯಲ್ಲೇ ಉಳಿಸಿಕೊಳ್ಳಲು ಬಯಸಿದ್ದಾರೆ.

ಈ ಪ್ರಕ್ರಿಯೆಯಲ್ಲಿ ಜೆಡಿಎಸ್ ಎಲ್ಲಕ್ಕಿಂತ ಮುಂದು. ಜೆಡಿಎಸ್ ನ ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪತ್ನಿ ಕ್ರಿಯಾ ಶೈಲಜಾ ಅವರನ್ನು ಹಾಗೂ ಮಹಾಲಕ್ಷ್ಮಿ
ಬಡಾವಣೆ ಶಾಸಕ ಗೋಪಾಲಯ್ಯ ಅವರು ಪತ್ನಿ ಎಚ್ .ಪಿ. ಹೇಮಲತಾ ಅವರನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿಯ ಎಸ್.ಆರ್. ವಿಶ್ವನಾಥ್ ಅವರು ಪತ್ನಿ ವಾಣಿಶ್ರೀ ಅವರನ್ನು ಕಣಕ್ಕಿಳಿಸಿದ್ದಾರೆ. ಕಾಂಗ್ರೆಸ್‍ನ ಆರ್ .ವಿ. ದೇವರಾಜ್ ಅವರು ಪುತ್ರ ಯುವರಾಜನಿಗೆ ಕಾರ್ಪೊರೇಟರ್ ಪಟ್ಟ ಕಟ್ಟಲು ಹೊರಟಿದ್ದಾರೆ.

ಇವರೆಲ್ಲರೂ ಕೋಟ್ಯಾಧಿಪತಿಗಳೇ ಎಂಬುದು ಇನ್ನೊಂದು ವಿಶೇಷ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಪತ್ನಿ ವಾಣಿಶ್ರೀ ವಿಶ್ವನಾಥ್ ಈ `ಪತ್ನಿಯರ ಸವಾಲಿ'ನಲ್ಲಿ ಆರ್ಥಿಕವಾಗಿ ಸಾಕಷ್ಟು ಮುಂದಿದ್ದಾರೆ. ವೈಯಕ್ತಿಕವಾಗಿ ಅವರಲ್ಲೇ ಕೋಟ್ಯಂತರ ಮೌಲ್ಯದ ನಗದು, ಆಸ್ತಿ ಇದೆ. ಶಾಸಕರಾಗಿರುವ ಪತಿ ವಿಶ್ವನಾಥ್ ಅವರ ಆಸ್ತಿಯನ್ನೂ ಸೇರಿಸಲಾಗಿ ಇವರ ಕುಟುಂಬದ ಆಸ್ತಿ-ಪಾಸ್ತಿ ಮೌಲ್ಯ ರು.25 ಕೋಟಿ ಮೀರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು, ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

SCROLL FOR NEXT