ಕಾಂಗ್ರೆಸ್ ಅಭ್ಯರ್ಥಿ ಯುವರಾಜ್, ಜೆಡಿಎಸ್ ಅಭ್ಯರ್ಥಿ ಹೇಮಲತಾ ಗೋಪಾಲಯ್ಯ, ಬಿಜೆಪಿ ಅಭ್ಯರ್ಥಿ ವಾಣಿಶ್ರೀ ವಿಶ್ವನಾಥ್ ಹಾಗೂ ಜೆಡಿಎಸ್ ಅಭ್ಯರ್ಥಿ, ಕ್ರಿಯಾ ಶೈಲಜಾ 
ಪ್ರಧಾನ ಸುದ್ದಿ

ಆಗರ್ಭ ಶ್ರೀಮಂತೆಯರು ಶಾಸಕರ ಈ ಪತ್ನಿಯರು

ಬಿಬಿಎಂಪಿ ಚುನಾವಣೆಗೆ ಶಾಸಕರು ತಮ್ಮ ಪತ್ನಿಯರನ್ನು ಕಣಕ್ಕಿಳಿಸಿ ಮತ್ತೊಂದು ದರ್ಜೆಯ ಅಧಿಕಾರವನ್ನು ಮನೆಯಲ್ಲೇ ಉಳಿಸಿಕೊಳ್ಳಲು ಬಯಸಿದ್ದಾರೆ...

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಶಾಸಕರು ತಮ್ಮ ಪತ್ನಿಯರನ್ನು ಕಣಕ್ಕಿಳಿಸಿ ಮತ್ತೊಂದು ದರ್ಜೆಯ ಅಧಿಕಾರವನ್ನು ಮನೆಯಲ್ಲೇ ಉಳಿಸಿಕೊಳ್ಳಲು ಬಯಸಿದ್ದಾರೆ.

ಈ ಪ್ರಕ್ರಿಯೆಯಲ್ಲಿ ಜೆಡಿಎಸ್ ಎಲ್ಲಕ್ಕಿಂತ ಮುಂದು. ಜೆಡಿಎಸ್ ನ ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪತ್ನಿ ಕ್ರಿಯಾ ಶೈಲಜಾ ಅವರನ್ನು ಹಾಗೂ ಮಹಾಲಕ್ಷ್ಮಿ
ಬಡಾವಣೆ ಶಾಸಕ ಗೋಪಾಲಯ್ಯ ಅವರು ಪತ್ನಿ ಎಚ್ .ಪಿ. ಹೇಮಲತಾ ಅವರನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿಯ ಎಸ್.ಆರ್. ವಿಶ್ವನಾಥ್ ಅವರು ಪತ್ನಿ ವಾಣಿಶ್ರೀ ಅವರನ್ನು ಕಣಕ್ಕಿಳಿಸಿದ್ದಾರೆ. ಕಾಂಗ್ರೆಸ್‍ನ ಆರ್ .ವಿ. ದೇವರಾಜ್ ಅವರು ಪುತ್ರ ಯುವರಾಜನಿಗೆ ಕಾರ್ಪೊರೇಟರ್ ಪಟ್ಟ ಕಟ್ಟಲು ಹೊರಟಿದ್ದಾರೆ.

ಇವರೆಲ್ಲರೂ ಕೋಟ್ಯಾಧಿಪತಿಗಳೇ ಎಂಬುದು ಇನ್ನೊಂದು ವಿಶೇಷ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಪತ್ನಿ ವಾಣಿಶ್ರೀ ವಿಶ್ವನಾಥ್ ಈ `ಪತ್ನಿಯರ ಸವಾಲಿ'ನಲ್ಲಿ ಆರ್ಥಿಕವಾಗಿ ಸಾಕಷ್ಟು ಮುಂದಿದ್ದಾರೆ. ವೈಯಕ್ತಿಕವಾಗಿ ಅವರಲ್ಲೇ ಕೋಟ್ಯಂತರ ಮೌಲ್ಯದ ನಗದು, ಆಸ್ತಿ ಇದೆ. ಶಾಸಕರಾಗಿರುವ ಪತಿ ವಿಶ್ವನಾಥ್ ಅವರ ಆಸ್ತಿಯನ್ನೂ ಸೇರಿಸಲಾಗಿ ಇವರ ಕುಟುಂಬದ ಆಸ್ತಿ-ಪಾಸ್ತಿ ಮೌಲ್ಯ ರು.25 ಕೋಟಿ ಮೀರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!