ಅಶ್ವಿನ್ ರಾವ್ 
ಪ್ರಧಾನ ಸುದ್ದಿ

ಅಶ್ವಿನ್ ರಾವ್ ವಿರುದ್ಧ ಮತ್ತೊಂದು ಎಫ್ಐಆರ್

ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್‍ರಾವ್ ಅವರ ಪುತ್ರ ಅಶ್ವಿನ್‍ರಾವ್ ವಿರುದ್ಧ ಮಂಗಳವಾರ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್‍ರಾವ್ ಅವರ ಪುತ್ರ ಅಶ್ವಿನ್‍ರಾವ್ ವಿರುದ್ಧ ಮಂಗಳವಾರ ಮತ್ತೊಂದು ಎಫ್ ಐಆರ್ ದಾಖಲಾಗಿದೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉದಯಶಂಕರ್ ಎಂಬುವವರು ವಿಶೇಷ ತನಿಖಾ ತಂಡಕ್ಕೆ ದೂರು ನೀಡಿದ್ದಾರೆ. ದೂರಿನ ಅನ್ವಯ ಅಶ್ವಿನ್ ರಾವ್, ವಿ.ಭಾಸ್ಕರ್ ಮತ್ತು ನರಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಅಶ್ವಿನ್‍ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೇರಿವೆ. ಅಶ್ವಿನ್ ರಾವ್ ಮತ್ತು ದೂರುದಾರ ಉದಯಶಂಕರ್ ನಡುವೆ ಹಣಕಾಸಿನ ಬೆದರಿಕೆಯಲ್ಲಿ ವಿ.ಭಾಸ್ಕರ್ ಮತ್ತು ನರಸಿಂಹ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದರು. ದೂರುದಾರ ಕೆಪಿಸಿಸಿ ಸದಸ್ಯ ಮತ್ತು ಉದ್ಯಮಿ ಪಿ.ಎನ್.ಕೃಷ್ಣಮೂರ್ತಿ ನೀಡಿರುವ ದೂರಿನಲ್ಲಿಯೂ ಸಹ ವಿ.ಭಾಸ್ಕರ್ ಮತ್ತು ನರಸಿಂಹ ಹೆಸರು ಪ್ರಸ್ತಾಪವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT