ಸತ್ರಜ್ ಅಜೀಜ್ 
ಪ್ರಧಾನ ಸುದ್ದಿ

ಆಜೀಜ್ ಕಾಶ್ಮೀರಿ ಪ್ರತ್ಯೇಕವಾದಿಗಳನ್ನು ಭೇಟಿ ಮಾಡಿದರೆ ಸರ್ಕಾರದಿಂದ ಸೂಕ್ತ ಉತ್ತರ

ಆಗಸ್ಟ್ ೨೩ ರಂದು ಭಯೋತ್ಪಾದನೆ ಬಗ್ಗೆ ಮಾತುಕತೆ ನಡೆಸಲು ಭಾರತಕ್ಕೆ ಆಗಮಿಸುತ್ತಿರುವ ಸತ್ರಜ್ ಅಜೀಜ್ ಅವರನ್ನು ಭೇಟಿ ಮಾಡಲು ಕಾಶ್ಮೀರಿ ಪ್ರತ್ಯೇಕವಾದಿಗಳಿಗೆ

ನವದೆಹಲಿ: ಆಗಸ್ಟ್ ೨೩ ರಂದು ಭಯೋತ್ಪಾದನೆ ಬಗ್ಗೆ ಮಾತುಕತೆ ನಡೆಸಲು ಭಾರತಕ್ಕೆ ಆಗಮಿಸುತ್ತಿರುವ ಸತ್ರಜ್ ಅಜೀಜ್ ಅವರನ್ನು ಭೇಟಿ ಮಾಡಲು ಕಾಶ್ಮೀರಿ ಪ್ರತ್ಯೇಕವಾದಿಗಳಿಗೆ  ಪಾಕಿಸ್ತಾನ ರಾಯಭಾರ ಕಚೇರಿ ಆಹ್ವಾನ ನೀಡಿರುವ ಸಂಗತಿಯನ್ನು ತೀವ್ರವಾಗಿ ಪರಿಗಣಿಸಿರುವ ಭಾರತ ಈ ಭೇಟಿ ನಡೆದರೆ ಸರ್ಕಾರ ಸೂಕ್ತ ಉತ್ತರ ನೀಡಲಿದೆ ಎಂದಿದೆ.

ಅಜೀಜ್ ಅವರು ಭಾರತೀಯ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿ ಮಾಡಿ ಭಯೋತ್ಪಾದನೆ ಬಗ್ಗೆ ಚರ್ಚಿಸಲು ಭಾರತಕ್ಕೆ ಬರುತ್ತಿರುವ ಹಿನ್ನಲೆಯಲ್ಲಿ ಪಾಕಿಸ್ತಾನ ರಾಯಭಾರಿ ಕಚೇರಿ ಕಾಶ್ಮೀರಿ ಪ್ರತ್ಯೇಕವಾದಿಗಳನ್ನು ಆಹ್ವಾನಿಸಿದೆ. ಇದರಿಂದ ಭಾರತ ಸರ್ಕಾರ ತೀವ್ರ ಅಸಮಧಾನಗೊಂಡಿದೆ ಎಂದು ಮೂಲಗಳು ತಿಳಿಸಿವೆ.

"ಏನಾಗುತ್ತದೆ ನೋಡೋಣ (ಅವರು ಪ್ರತ್ಯೇಕವಾದಿಗಳನ್ನು ಭೇಟಿ ಮಾಡಿದರೆ), ಸರ್ಕಾರ ಅದಕ್ಕೆ ಸೂಕ್ತ ಉತ್ತರ ನೀಡುತ್ತದೆ" ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಕಾಶ್ಮೀರಿ ಪ್ರತ್ಯೇಕವಾದಿ ಸಯ್ಯದ್ ಅಲಿ ಗಿಲಾನಿಯನ್ನು ಅಜೀಜ್ ಅವರನ್ನು ಭೇಟಿ ಮಾಡಲು ಆಹ್ವಾನಿಸಿದ್ದರೆ, ಮೀರ್ವಾಜ್ ಉಮರ್ ಫರೂಕ್ ನಂತಹ ಇತರ ಪ್ರತ್ಯೇಕವಾದಿ ನಾಯಕರನ್ನು ಪಾಕಿಸ್ತಾನ ರಾಜಭಾರಿ ಕಚೇರಿ ಅಜೀಜ್ ಅವರಿಗೆ ನೀಡುತ್ತಿರುವ ಗೌರವದಲ್ಲಿ ಭಾಗಿಯಾಗಲು ಆಹ್ವಾನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT