ಪ್ರಧಾನ ಸುದ್ದಿ

ಇಳಿಯದ ಈರುಳ್ಳಿ ಬೆಲೆ; ೧೦ ಸಾವಿರ ಟನ್ ಆಮದು ಮಾಡಿಕೊಳ್ಳಲಿರುವ ಎಂ ಎಂ ಟಿ ಸಿ

ಈರುಳ್ಳಿ ಬೆಳೆಯನ್ನಿ ನಿಯಂತ್ರಿಸಲು ಕೇಂದ್ರ ಸರ್ಕಾರ ಎಂ ಎಂ ಟಿ ಸಿಗೆ ೧೦ ಸಾವಿರ ಟನ್ ಈರುಳ್ಳಿ ಆಮದು ಮಾಡಿಕೊಳ್ಳುವಂತೆ ಸೂಚಿಸಿದೆ.

ನವದೆಹಲಿ: ಈರುಳ್ಳಿ ಬೆಳೆಯನ್ನಿ ನಿಯಂತ್ರಿಸಲು ಕೇಂದ್ರ ಸರ್ಕಾರ ಎಂ ಎಂ ಟಿ ಸಿಗೆ ೧೦ ಸಾವಿರ ಟನ್ ಈರುಳ್ಳಿ ಆಮದು ಮಾಡಿಕೊಳ್ಳುವಂತೆ ಸೂಚಿಸಿದೆ.

"ಏರುತ್ತಿರುವ ಈರುಳ್ಳಿ ನಿಯಂತ್ರಿಸಲು ಹಾಗೂ ಲಭ್ಯತೆಯನ್ನು ಹೆಚ್ಚಿಸಲು ಸರ್ಕಾರ ತನ್ನ ಒಡೆತನದ ಎಂ ಎಂ ಟಿ ಸಿ ಗೆ ಜಾಗತಿಕ ಟೆಂಡರ್ ಕರೆದು ೧೦ ಸಾವಿರ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಸೂಚಿಸಿದೆ" ಎಂದು ಕೃಷಿ ಸಚಿವಾಲಯ ತಿಳಿಸಿದೆ.

ಬೇಡಿಕೆ ಮತ್ತು ಪೂರೈಕೆಯ ಏರುಪೇರಿನಿಂದಾಗಿ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಗಗನಕ್ಕೇರಿದೆ.

ರಾಷ್ಟ್ರದ ರಾಜಧಾನಿಯಲ್ಲಿ ಚಿಲ್ಲರೆ ಅಂಗಡಿಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ ೬೦ ರೂಪಾಯಿವರೆಗೆ ಏರಿದ್ದು, ದೇಶದ ವಿವಿಧ ಪ್ರದೇಶಗಳಲ್ಲೂ ಇದು ವಿಭಿನ್ನವಾಗಿಲ್ಲ.

ಈರುಳ್ಳಿ ಉತ್ಪಾದನೆಯು ಈ ವರ್ಷ ಕೈಕೊಟಿದ್ದು, ಸರ್ಕಾರದ ದಾಸ್ತಾನಿನಲ್ಲಿರುವ ಈರುಳ್ಳಿ ಕೂಡ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ.

ಕಳೆದ ವರ್ಷ ಈ ಸಮಯದಲ್ಲಿ ಈರುಳ್ಳಿ ಉತ್ಪಾದನೆ ೧೯೪ ಲಕ್ಷ ಟನ್ ನಷ್ಟಿತ್ತು ಈ ವರ್ಷ ಅದು ೧೮೯ ಲಕ್ಷ ಟನ್ ಗೆ ಕುಸಿದಿದೆ.

ಮಹಾರಾಷ್ಟ್ರ, ಕರ್ನಾಟಕ ಮತ್ತು ಮಧ್ಯಪ್ರದೇಶ ಅತಿ ಹೆಚ್ಚು ಈರುಳ್ಳಿ ಉತ್ಪಾದನಾ ರಾಜ್ಯಗಳು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT