ಕಾಶ್ಮೀರಿ ಪ್ರತ್ಯೇಕವಾದಿ ಮುಖಂಡರು 
ಪ್ರಧಾನ ಸುದ್ದಿ

ಎರಡು ಗಂಟೆಗಳ ಗೃಹಬಂಧನದ ನಂತರ ಕಾಶ್ಮೀರಿ ಪ್ರತ್ಯೇಕವಾದಿಗಳ ಬಿಡುಗಡೆ

ಗೊಂದಲಮಯ ಘಟನೆಗಳಲ್ಲಿ, ರಾಷ್ಟ್ರೀಯ ಭದ್ರತಾ ಸಂಸ್ಥೆಗಳ(ಎನ್ ಎಸ್ ಎ) ಮಾತುಕತೆಗೂ ಮುಂಚಿತವಾಗಿ ಗೃಹಬಂಧನದಲ್ಲಿ ಇರಿಸಲಾಗಿದ್ದ ಇಬ್ಬರು ಕಾಶ್ಮೀರಿ ಪ್ರತ್ಯೇಕವಾದಿ ನಾಯಕರನ್ನು...

ಶ್ರೀನಗರ: ಗೊಂದಲಮಯ ಘಟನೆಗಳಲ್ಲಿ, ರಾಷ್ಟ್ರೀಯ ಭದ್ರತಾ ಸಂಸ್ಥೆಗಳ(ಎನ್ ಎಸ್ ಎ) ಮಾತುಕತೆಗೂ ಮುಂಚಿತವಾಗಿ ಗೃಹಬಂಧನದಲ್ಲಿ ಇರಿಸಲಾಗಿದ್ದ ಇಬ್ಬರು ಕಾಶ್ಮೀರಿ ಪ್ರತ್ಯೇಕವಾದಿ ನಾಯಕರನ್ನು ಎರಡು ಗಂಟೆಗಳ ನಂತರ ಜಮ್ಮು ಕಾಶ್ಮೀರ ಸರ್ಕಾರ ಬಿಡುಗಡೆ ಮಾಡಿದೆ.

ಆದರೆ ಮೊದಲಿನಂತೆಯೇ ಹುರಿಯತ್ ನಾಯಕ ಸಯ್ಯದ್ ಅಲಿ ಷಾ ಗಿಲಾನಿ ಅವರ ಗೃಹ ಬಂಧನ ಮುಂದುವರೆದಿದೆ. ವರದಿಗಳ ಪ್ರಕಾರ ಅವರ ಮನೆಯ ಹೊರಗಡೆ ಭದ್ರತೆಯನ್ನು ಹೆಚ್ಚಿಸಿದ್ದು ಅವರು ಸಾರ್ವಜನಿಕ ಹೇಳಿಕೆ ನೀಡದಂತೆ ನಿಷೇಧ ಹೇರಲಾಗಿದೆ.

ಪ್ರತ್ಯೇಕವಾದಿಗಳಾದ ಯಾಸಿನ್ ಮಲಿಕ್, ಸಯ್ಯದ್ ಅಲಿ ಷಾ ಗಿಲಾನಿ ಮತ್ತು ಮಿರ್ವೈಜ್ ಉಮರ್ ಫರೂಕ್ ಇವರುಗಳನ್ನು ಪಾಕಿಸ್ತಾನ ರಕ್ಷಣಾ ಸಲೆಹೆಗಾರ ಸತ್ರಜ್ ಅಜೀಜ್ ಅವರನ್ನು ಭಾನುವಾರ ಭೇಟಿ ಮಾಡಲು ಪಾಕಿಸ್ತಾನ ರಾಯಭಾರ ಕಚೇರಿ ಆಹ್ವಾನಿಸಿತ್ತು.

ಭಾರತದ ರಕ್ಷಣಾ ಸಲೆಹೆಗಾರ ಅಜಿತ್ ದೋವಲ್ ಜತೆ ಭಯೋತ್ಪಾದನೆಯ ಬಗ್ಗೆ ಚರ್ಚೆ ಮಾಡಲು ಸತ್ರಜ್ ಅಜೀಜ್ ಭಾರತಕ್ಕೆ ಬರುತ್ತಿದ್ದು, ಈಗ ಈ ಇಬ್ಬರು ಹುರಿಯತ್ ನಾಯಕರು ಭಾನುವಾರ ಅಜೀಜ್ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಈ ಮಾತುಕತೆಗಳನ್ನು ರದ್ದುಪಡಿಸಲು ಪಾಕಿಸ್ತಾನ ಮಾಡುತ್ತಿರುವ ತಂತ್ರ ಇದು ಎಂದು ಬಣ್ಣಿಸಲಾಗುತ್ತಿದ್ದು, ಆದರೆ ಎನ್ ಎಸ್ ಎ ಮಾತುಕತೆಗಳು ಜರುಗುವಂತೆ ಭಾರತ ದೃಢನಿಲುವು ಹೊಂದಿದೆ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಕಳೆದ ವರ್ಷದ ಆಗಸ್ಟ್ ನಲ್ಲಿ ಈ ಮಾತುಕತೆಗಳು ಮುರಿದುಬಿದ್ದಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT