ಕಾಶ್ಮೀರಿ ಪ್ರತ್ಯೇಕವಾದಿ ಮುಖಂಡರು 
ಪ್ರಧಾನ ಸುದ್ದಿ

ಎರಡು ಗಂಟೆಗಳ ಗೃಹಬಂಧನದ ನಂತರ ಕಾಶ್ಮೀರಿ ಪ್ರತ್ಯೇಕವಾದಿಗಳ ಬಿಡುಗಡೆ

ಗೊಂದಲಮಯ ಘಟನೆಗಳಲ್ಲಿ, ರಾಷ್ಟ್ರೀಯ ಭದ್ರತಾ ಸಂಸ್ಥೆಗಳ(ಎನ್ ಎಸ್ ಎ) ಮಾತುಕತೆಗೂ ಮುಂಚಿತವಾಗಿ ಗೃಹಬಂಧನದಲ್ಲಿ ಇರಿಸಲಾಗಿದ್ದ ಇಬ್ಬರು ಕಾಶ್ಮೀರಿ ಪ್ರತ್ಯೇಕವಾದಿ ನಾಯಕರನ್ನು...

ಶ್ರೀನಗರ: ಗೊಂದಲಮಯ ಘಟನೆಗಳಲ್ಲಿ, ರಾಷ್ಟ್ರೀಯ ಭದ್ರತಾ ಸಂಸ್ಥೆಗಳ(ಎನ್ ಎಸ್ ಎ) ಮಾತುಕತೆಗೂ ಮುಂಚಿತವಾಗಿ ಗೃಹಬಂಧನದಲ್ಲಿ ಇರಿಸಲಾಗಿದ್ದ ಇಬ್ಬರು ಕಾಶ್ಮೀರಿ ಪ್ರತ್ಯೇಕವಾದಿ ನಾಯಕರನ್ನು ಎರಡು ಗಂಟೆಗಳ ನಂತರ ಜಮ್ಮು ಕಾಶ್ಮೀರ ಸರ್ಕಾರ ಬಿಡುಗಡೆ ಮಾಡಿದೆ.

ಆದರೆ ಮೊದಲಿನಂತೆಯೇ ಹುರಿಯತ್ ನಾಯಕ ಸಯ್ಯದ್ ಅಲಿ ಷಾ ಗಿಲಾನಿ ಅವರ ಗೃಹ ಬಂಧನ ಮುಂದುವರೆದಿದೆ. ವರದಿಗಳ ಪ್ರಕಾರ ಅವರ ಮನೆಯ ಹೊರಗಡೆ ಭದ್ರತೆಯನ್ನು ಹೆಚ್ಚಿಸಿದ್ದು ಅವರು ಸಾರ್ವಜನಿಕ ಹೇಳಿಕೆ ನೀಡದಂತೆ ನಿಷೇಧ ಹೇರಲಾಗಿದೆ.

ಪ್ರತ್ಯೇಕವಾದಿಗಳಾದ ಯಾಸಿನ್ ಮಲಿಕ್, ಸಯ್ಯದ್ ಅಲಿ ಷಾ ಗಿಲಾನಿ ಮತ್ತು ಮಿರ್ವೈಜ್ ಉಮರ್ ಫರೂಕ್ ಇವರುಗಳನ್ನು ಪಾಕಿಸ್ತಾನ ರಕ್ಷಣಾ ಸಲೆಹೆಗಾರ ಸತ್ರಜ್ ಅಜೀಜ್ ಅವರನ್ನು ಭಾನುವಾರ ಭೇಟಿ ಮಾಡಲು ಪಾಕಿಸ್ತಾನ ರಾಯಭಾರ ಕಚೇರಿ ಆಹ್ವಾನಿಸಿತ್ತು.

ಭಾರತದ ರಕ್ಷಣಾ ಸಲೆಹೆಗಾರ ಅಜಿತ್ ದೋವಲ್ ಜತೆ ಭಯೋತ್ಪಾದನೆಯ ಬಗ್ಗೆ ಚರ್ಚೆ ಮಾಡಲು ಸತ್ರಜ್ ಅಜೀಜ್ ಭಾರತಕ್ಕೆ ಬರುತ್ತಿದ್ದು, ಈಗ ಈ ಇಬ್ಬರು ಹುರಿಯತ್ ನಾಯಕರು ಭಾನುವಾರ ಅಜೀಜ್ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಈ ಮಾತುಕತೆಗಳನ್ನು ರದ್ದುಪಡಿಸಲು ಪಾಕಿಸ್ತಾನ ಮಾಡುತ್ತಿರುವ ತಂತ್ರ ಇದು ಎಂದು ಬಣ್ಣಿಸಲಾಗುತ್ತಿದ್ದು, ಆದರೆ ಎನ್ ಎಸ್ ಎ ಮಾತುಕತೆಗಳು ಜರುಗುವಂತೆ ಭಾರತ ದೃಢನಿಲುವು ಹೊಂದಿದೆ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಕಳೆದ ವರ್ಷದ ಆಗಸ್ಟ್ ನಲ್ಲಿ ಈ ಮಾತುಕತೆಗಳು ಮುರಿದುಬಿದ್ದಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT