ಬಿಬಿಎಂಪಿ ಕಚೇರಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಮತದಾನಕ್ಕೆ ಸಿದ್ಧತೆ, ಮೊಬೈಲ್ ಮೂಲಕ ಬರಲಿದೆ ಮಾಹಿತಿ

3 ಬಿಬಿಎಂಪಿ ಮತದಾನಕ್ಕೆ ಅಗತ್ಯ ಸಿದ್ಧತೆ ನಡೆಸಿದ್ದು, ಸಿಬ್ಬಂದಿ ಕೊರತೆಯಾಗದಂತೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ತಿಳಿಸಿದರು...

ಬೆಂಗಳೂರು: 3 ಬಿಬಿಎಂಪಿ ಮತದಾನಕ್ಕೆ ಅಗತ್ಯ ಸಿದ್ಧತೆ ನಡೆಸಿದ್ದು, ಸಿಬ್ಬಂದಿ ಕೊರತೆಯಾಗದಂತೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ತಿಳಿಸಿದರು.

ಬೆಂಗಳೂರು ಪ್ರೆಸ್‍ಕ್ಲಬ್ ಹಾಗೂ ವರದಿಗಾರರ ಕೂಟ ಗುರುವಾರ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು ವಿವರಗಳನ್ನು ನೀಡಿದರು. ಈ ಬಾರಿ ಮತದಾನದಲ್ಲಿ ಯಾರನ್ನೂ ಆರಿಸದ `ನೋಟಾ' ಆಯ್ಕೆ ಕೈಬಿಡಲಾಗಿದೆ ಎನ್ನುವುದು ಸರಿಯಲ್ಲ. ಏಕೆಂದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನೋಟಾ ಆಯ್ಕೆ ತರಲು ಕಾನೂನಿನಲ್ಲಿ
ತಿದ್ದುಪಡಿ ಮಾಡಬೇಕು. ಅಲ್ಲಿಯವರೆಗೆ, ಮತದಾರರು ಫಾರ್ಮ್ 27 ಪಡೆದು ಯಾರಿಗೂ ಮತ ನೀಡಲು ಇಷ್ಟವಿಲ್ಲ ಎಂದು ಬರೆದು ಕೊಡುವ ಆಯ್ಕೆ ಇದ್ದೇ ಇದೆ ಎಂದರು. ಮುಖ್ಯಮಂತ್ರಿಗಳಿಗೆ ಸಂಬಂಧಿಸಿದಂತೆ ನಿವೇಶನ ವಿಚಾರವಾಗಿ ದೂರು ಬಂದಿರುವ ಬಗ್ಗೆ ಕೇಳಿದ್ದೇನೆ. ಆದರೆ ಪ್ರಕರಣದ ವಿಚಾರವಾಗಿ ಯಾವುದೇ ಹೆಚ್ಚಿನ ಮಾಹಿತಿ
ಲಭ್ಯವಿಲ್ಲ ಎಂದು ಆಯುಕ್ತ ಶ್ರೀನಿವಾಸಾಚಾರಿ ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಜಿ. ಕುಮಾರ್‍ನಾಯಕ್ ಮತದಾರರ ವಿವರಗಳನ್ನು ನೀಡಿ, ಮತದಾನದ ಅವಶ್ಯಕತೆ ಯನ್ನು ಒತ್ತಿ ಹೇಳಿದರು. ಚುನಾವಣೆ ಒತ್ತಡದಿಂದ ಪಾಲಿಕೆಯ ಸಾಮಾನ್ಯ ಸೇವೆಗಳಿಗೆ ತೊಂದರೆಯಾಗಿದೆ ಎಂಬ ದೂರಿಗೆ ಪ್ರತಿಕ್ರಿಯಿಸಿದ ಅವರು, ಕೆಲವು ಕಡೆ ಬಿಬಿಎಂಪಿ ಕಚೇರಿಗೆ ಬೀಗ ಹಾಕಿರುವುದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ಚಿತ್ರಗಳೂ ಹರಿದಾಡುತ್ತಿವೆ. ಚುಣಾವಣಾ ಕಾರ್ಯಕ್ಕೆ ಅಥಿಕಾರಿಗಳನ್ನು ನೇಮಿಸಿರುವು ದರಿಂದ ಸಾಮಾನ್ಯ ಸೇವೆಗಳನ್ನು ಸುಲಭವಾಗಿ ಒದಗಿಸಲು ಸಾಧ್ಯವಾಗುತ್ತಿಲ್ಲ. ಆದರೆ, ಕಚೇರಿಗೆ ಬೀಗ ಹಾಕಿದ ವಿಚಾರ ತಿಳಿಸಿದ ನಂತರ ಕೂಡಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT