ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಜ್ ಅಜೀಜ್ 
ಪ್ರಧಾನ ಸುದ್ದಿ

ಪ್ರತ್ಯೇಕವಾದಿಗಳನ್ನು ಭೇಟಿ ಮಾಡದಂತೆ ಪಾಕಿಸ್ತಾನಕ್ಕೆ ಸೂಚಿಸಿದ ಭಾರತ

ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಜ್ ಅಜೀಜ್ ಅವರು ಹುರಿಯತ್ ಪ್ರತ್ಯೇಕವಾದಿಗಳನ್ನು ಭೇಟಿ ಮಾಡುವುದರಿಂದ ದೂರ ಉಳಿಯುವಂತೆ ಪಾಕಿಸ್ತಾನಕ್ಕೆ

ನವದೆಹಲಿ: ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಜ್ ಅಜೀಜ್ ಅವರು ಹುರಿಯತ್ ಪ್ರತ್ಯೇಕವಾದಿಗಳನ್ನು ಭೇಟಿ ಮಾಡುವುದರಿಂದ ದೂರ ಉಳಿಯುವಂತೆ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸೂಚನೆ ನೀಡಿದೆ. ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆ ಭಯೋತ್ಪಾದನೆ ಬಗ್ಗೆ ಚರ್ಚಿಸಲು ಭಾರತಕ್ಕೆ ಬರುತ್ತಿರುವ ಸರ್ತಜ್ ಅಜೀಜ್ ಅವರನ್ನು ಭೇಟಿ ಮಾಡಲು ಕಾಶ್ಮೀರಿ ಪ್ರತ್ಯೇಕವಾದಿಗಳಿಗೆ ಪಾಕಿಸ್ತಾನ ರಾಯಭಾರ ಕಚೇರಿ ಆಹ್ವಾನ ನೀಡಿತ್ತು. ಇದು ಸರಿಯಾದ ನಡೆಯಲ್ಲ ಎಂದು ಭಾರತ ಸರ್ಕಾರ ತಿಳಿಸಿದೆ.

"ಸರ್ತಜ್ ಅಜೀಜ್ ಅವರು ಹುರಿಯತ್ ಪ್ರತಿನಿಧಿಗಳನ್ನು ಭಾರತದಲ್ಲಿ ಭೇಟಿ ಮಾಡುವುದು ಸೂಕ್ತವಲ್ಲ ಎಂದು ಪಾಕಿಸ್ತಾನಕ್ಕೆ ನೆನ್ನೆ ಭಾರತ ಸಲಹೆ ನೀಡಿದೆ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.

ಆಗಸ್ಟ್ ೨೩ ರಂದು ಮೊದಲ ಬಾರಿಗೆ ಭಯೋತ್ಪಾದನೆ ಬಗ್ಗೆ ಚರ್ಚಿಸಲು ಎರಡು ದೇಶದ ಭದ್ರತಾ ಸಲಹೆಗಾರರು ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ. ಈ ಭೇಟಿ ರಷ್ಯಾದ ಉಫಾದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್ ಅವರನ್ನು ಭೇಟಿ ಮಾಡಿದ್ದಾಗ ನಿಗದಿಯಾಗಿತ್ತು.

ಅಜೀಜ್ ಅವರನ್ನು ಭೇಟಿ ಮಾಡಲು ಕಾಶ್ಮೀರಿ ಪ್ರತ್ಯೇಕವಾದಿ ಮುಖಂಡರಾದ ಸಯ್ಯದ ಅಲಿ ಷಾ ಗಿಲಾನಿ, ಉಮರ್ ಫಾರುಕ್  ಇವರುಗಳಿಗೆ ಆಹ್ವಾನ ನೀಡಿರುವುದು ಭಾರತಕ್ಕೆ ಇರುಸು ಮುರುಸು ತಂದು ಈ ಮಾತುಕತೆಗಳು ರದ್ದಾಗುವಂತೆ ನೋಡಿಕೊಳ್ಳಲು ಪಾಕಿಸ್ತಾನದ ತಂತ್ರ ಎಂದು ಬಣ್ಣಿಸಲಾಗಿದೆ. ಆದರೆ ಪಾಕಿಸ್ತಾನ ಇದನ್ನು ಅಲ್ಲಗೆಳೆದಿದ್ದು ಇದರಲ್ಲಿ ವಿಶೇಷವೇನಿಲ್ಲ. ಇವುಗಳು ಸಾಮಾನ್ಯವಾಗಿ ನಡೆಯುವ ಭೇಟಿಗಳು ಎಂದಿದೆ.

ಇದೇ ಕಾರಣಕ್ಕಾಗಿ ಕಳೆದ ವರ್ಷ ಈ ಮಾತುಕತೆಗಳು ರದ್ದಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT