ಲೋಕಾಯುಕ್ತ ಕಚೇರಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಲೋಕಾ ಹಗರಣ: 10ನೇ ಆರೋಪಿ ಸೆರೆ

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದ ತನಿಖೆ ನಡೆಸಿರುವ ಎಸ್‍ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿದೆ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದ ತನಿಖೆ ನಡೆಸಿರುವ ಎಸ್‍ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿದೆ.

ನರಸಿಂಹರಾವ್ ಬಂಧಿತ ಆರೋಪಿ. ಇವರು ಲೋಕಾಯುಕ್ತ ನ್ಯಾ. ವೈ.ಭಾಸ್ಕರ್‍ರಾವ್ ಅವರ ಪತ್ನಿಯ ಸಹೋದರಿಯ ಮಗ ಎಂದು ಹೇಳಲಾಗಿದೆಯಾದರೂ, ಪೊಲೀಸರು ಇದನ್ನು ಖಚಿತಪಡಿಸಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಬೇಕಿದೆ ಎಂದಿದ್ದಾರೆ. ಗುರುವಾರ ಹೈದರಾಬಾದ್‍ನಲ್ಲಿ ನರಸಿಂಹರಾವ್ ಅವರನ್ನು ಬಂಧಿಸಿದ ಎಸ್‍ಐಟಿ ಅಧಿಕಾರಿಗಳ ತಂಡ, ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಆ.26ರವರೆಗೆ ತಮ್ಮ ವಶಕ್ಕೆ ಪಡೆದರು.

ಉದ್ಯಮಿ ಪಿ.ಎನ್.ಕೃಷ್ಣಮೂರ್ತಿ ದಾಖಲಿಸಿದ್ದ ಪ್ರಕರಣದಲ್ಲಿ ಈ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ-ದಲ್ಲಿ ಇವರು ಐದನೇ ಆರೋಪಿಯಾಗಿದ್ದಾರೆ. ಹೈದರಾಬಾದ್‍ನ ಲಕಡಿಕಪೂಲ್ ಬಳಿಯ ಆದರ್ಶನಗರದಲ್ಲಿರುವ ಸ್ನೇಹಿತ ವೆಂಕಟೇಶ್ವರ್ ರಾವ್‍ನ ಕಚೇರಿಯಲ್ಲಿ ಗುರುವಾರ ರಾತ್ರಿ 9.15ಕ್ಕೆ ನರಸಿಂಹ ರಾವ್‍ನನ್ನು ಬಂಧಿಸಿ ನಗರಕ್ಕೆ ಕರೆತರಲಾಗಿದೆ. ಶುಕ್ರವಾರ ಬೆಳಗ್ಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಅಧಿಕಾರಿಗಳು ಸಂಜೆ 4.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಎಸ್‍ಐಟಿ ಅಧಿಕಾರಿಗಳ ಮನವಿ ಪುರಸ್ಕರಿಸಿದ ನ್ಯಾಯಾಧೀಶ ವಿ.ಜಿ.- ಬೋ-ಪಯ್ಯ, ಆ.26ರವೆರೆಗೆ ಪೊಲೀಸ್ ವಶಕ್ಕೆ ನೀಡಿದರು. ಲೋಕಾಯುಕ್ತರ ಪುತ್ರ ಅಶ್ವಿನ್‍ರಾವ್ ಗೆ ಕೃಷ್ಣಮೂರ್ತಿಯವರನ್ನು ಪರಿಚಯಿಸಿ ಹಣದ ಬೇಡಿಕೆ ಇಟ್ಟಿರುವ ಆರೋಪದ ಮೇಲೆ ಆರೋಪಿ ನರಸಿಂಹರಾವ್‍ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT