ಶಾಸಕ ವೆಂಕಟೇಶ್ ನಾಯಕ್ ಮತ್ತು ಅಪಘಾತಕ್ಕೀಡಾದ ರೈಲು 
ಪ್ರಧಾನ ಸುದ್ದಿ

ಬೆಂಗಳೂರು-ನಾಂದೇಡ್ ಎಕ್ಸ್ ಪ್ರೆಸ್ ರೈಲು ಅಪಘಾತ: ಶಾಸಕ ಸೇರಿ ಐವರ ದುರ್ಮರಣ

ಬೆಂಗಳೂರು ನಾಂದೇಡ್ ಎಕ್ಸ್ ಪ್ರೆಸ್ ರೈಲಿಗೆ ಗ್ರಾನೈಡ್ ಕಲ್ಲು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ...

ಪೆನುಕೊಂಡ: ಬೆಂಗಳೂರು ನಾಂದೇಡ್ ಎಕ್ಸ್ ಪ್ರೆಸ್ ರೈಲಿಗೆ ಗ್ರಾನೈಡ್ ಕಲ್ಲು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ 2.30ಕ್ಕೆ ನಡೆದಿದೆ.

ಆಂಧ್ರಪ್ರದೇಶದ ಪೆನುಕೊಂಡ ಸಮೀಪದ ಮಡಕಶಿರ ಬಳಿ ರೈಲ್ವೆ ಕ್ರಾಸಿಂಗ್ ನಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ವೆಂಕಟೇಶ್ ನಾಯಕ್ ಸೇರಿದಂತೆ ಆರು ಮಂದಿ ದುರ್ಮರಣ ಹೊಂದಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಲಾರಿಯಲ್ಲಿ ಇದ್ದ ಇಬ್ಬರು ಹಾಗೂ ರೈಲಿನಲ್ಲಿ ಇದ್ದ ನಾಲ್ಕು ಪ್ರಯಾಣಿಕರು ಸಾವನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಚ್ 1 ಎಸಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಬೋಗಿಯೊಳಗೆ ಮಲಗಿದ್ದ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಘಟನೆ ವಿವರ:
ಗ್ರಾನೈಟ್ ಕಲ್ಲು ತುಂಬಿದ್ದ ಲಾರಿ ಕಾಳಪತ್ರಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಮಡಕಶಿರ ರೈಲ್ವೆ ಕ್ರಾಸಿಂಗ್ ಬಳಿ ಗೇಟ್ ಕ್ಲೋಸ್ ಮಾಡಲಾಗಿತ್ತು. ಆದರೆ ನಿದ್ದೆ ಗಣ್ಣಲ್ಲಿ ಚಾಲಕ ಲಾರಿ ಚಲಾಯಿಸುತ್ತಿದ್ದು, ವೇಗವಾಗಿ ಬಂದ ಲಾರಿ ರೈಲ್ವೆ ಕ್ರಾಸಿಂಗ್ ಬಳಿ ಬೆಂಗಳೂರು ನಾಂದೇಡ್ ಎಕ್ಸ್ ಪ್ರೆಸ್ ರೈಲಿನ ಎಚ್ 1ಎಸಿ ಬೋಗಿಗೆ ಡಿಕ್ಕಿ ಹೊಡೆದಿದೆ. ರೈಲಿನಲ್ಲಿ ಮಲಗಿದ್ದ ಶಾಸಕ ವೆಂಕಟೇಶ್ ನಾಯಕ್, ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಅಪಘಾತದಿಂದಾಗಿ ನಾಲ್ಕು ಬೋಗಿಗಳು ಹಳಿ ತಪ್ಪಿವೆ. ಬಿ1, ಎಚ್ 1 ಮತ್ತು ಎಸ್ 2 ಬೋಗಿ ಹಳಿ ತಪ್ಪಿವೆ.

ವೆಂಕಟೇಶ್ ನಾಯಕ್ ಅವರ ಬಗ್ಗೆ ಒಂದಿಷ್ಟು: ವೆಂಕಟೇಶ್ ನಾಯಕ್ 1936ರ ಜೂನ್ 6 ರಂದು ಜನಿಸಿದ್ದರು. 1991ರಲ್ಲಿ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿದರು. 1998-99ರಲ್ಲಿ ಲೋಕಸಭೆಗೆ ಆಯ್ಕೆಯಾದರು. 2004ರಲ್ಲಿ ಮತ್ತೆ ಲೋಕಸಭೆಗೆ ಸಂಸದರಾಗಿ ಆಯ್ಕೆಯಾದರು. ಒಟ್ಟು ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ದೇವದುರ್ಗದ ಶಾಸಕರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT