ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಬಿಬಿಎಂಪಿ ಚುನಾವಣೆ: ಬಹುಮತ ದಕ್ಕದಿದ್ದರೆ ಆಪರೇಷನ್ ಹಸ್ತ?

ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೇ ಇದ್ದಲ್ಲಿ `ಆಪರೇಷನ್ ಹಸ್ತ' ನಡೆಸುವ ಕುರಿತು ಕೈ ಪಾಳಯದಲ್ಲಿ ಸದ್ದಿಲ್ಲದೇ ಚರ್ಚೆ ನಡೆಯುತ್ತಿದೆ...

ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೇ ಇದ್ದಲ್ಲಿ `ಆಪರೇಷನ್ ಹಸ್ತ' ನಡೆಸುವ ಕುರಿತು ಕೈ ಪಾಳಯದಲ್ಲಿ ಸದ್ದಿಲ್ಲದೇ ಚರ್ಚೆ ನಡೆಯುತ್ತಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರ ಹಿಡಿಯಲೇಬೇಕೆಂಬ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಿತಾಂಶವನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಒಂದೊಮ್ಮೆ ಫಲಿತಾಂಶದಲ್ಲಿ ಕಾಂಗ್ರೆಸ್ ಮಾ್ಯಜಿಕ್ ಸಂಖ್ಯೆಯನ್ನು ಮುಟ್ಟದೇ ಹೋದರೆ ಬೇರೆ ಪಕ್ಷಗಳಿಗೆ ಆಪರೇಷನ್ ನಡೆಯುವುದು ಖಚಿತ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.

ಪಕ್ಷಾಂತರ ನಿಷೇಧದ ಗುಮ್ಮ: ಆದರೆ, ಬಿಬಿಎಂಪಿ ಸದಸ್ಯರು ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧಿಸಿ ಗೆಲ್ಲುವುದರಿಂದ ಅವರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗುತ್ತದೆ. ಹೀಗಾಗಿ ಇಂಥ ಕಾನೂನಿನ ಸುಳಿಯಲ್ಲಿ ಸಿಲುಕದ ರೀತಿಯಲ್ಲಿ ಆಪರೇಷನ್ ನಡೆಸುವ ಇಕ್ಕಟ್ಟು ಸೃಷ್ಟಿಯಾಗಬಹುದು. ಒಂದು ವೇಳೆ ಪಾಲಿಗೆ ಫಲಿತಾಂಶ ಅತಂತ್ರ ಸ್ಥಿತಿ ತಂದರೆ, ಸಹಜವಾಗಿಯೇ ಆಡಳಿತ ಪಕ್ಷದ ಕಣ್ಣು ಪಕ್ಷೇತರರು ಹಾಗೂ ಜೆಡಿಎಸ್ ಮೇಲೆ ಬೀಳಲಿದೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾದ ಸಚಿವರೊಬ್ಬರಿಗೆ ಆಪರೇಷನ್ ನಡೆಸುವ `ಮಹಾ'ಭಾರವನ್ನು ಒಪ್ಪಿಸಲಾಗಿದ್ದು, ಫಲಿತಾಂಶವನ್ನು ಆಧರಿಸಿ ಕಾರ್ಯತಂತ್ರ ನಡೆಸಿ `ಹೌದಪ್ಪ' ಎನ್ನಿಸಿಕೊಳ್ಳಲು ಆ ಸಚಿವರು ಪ್ರಯತ್ನ ನಡೆಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT