ಮೀಸಲಾತಿ ಕೋರಿ ಗುಜರಾತಿನಲ್ಲಿ ಪಟೇಲ್ ಸಮುದಾಯ ನಡೆಸಿರುವ ರ್ಯಾಲಿ 
ಪ್ರಧಾನ ಸುದ್ದಿ

ಮೀಸಲಾತಿಗಾಗಿ ಗುಜರಾತಿ ಪಟೇಲರ ಮೆಗಾ ರ್ಯಾಲಿ; ಸ್ಥಗಿತಗೊಂಡ ಅಹಮದಾಬಾದ್

ಇತರೆ ಹಿಂದುಳಿದ ವರ್ಗದಡಿ ಮೀಸಲಾತಿ ಕೋರಿ ಅಹಮದಾಬಾದಿನಲ್ಲಿ ಪಟೇಲ್ ಸಮುದಾಯ ಬೃಹತ್ ರ್ಯಾಲಿ ನಡೆಸಿದೆ.

ಅಹಮದಾಬಾದ್: ಇತರೆ ಹಿಂದುಳಿದ ವರ್ಗದಡಿ ಮೀಸಲಾತಿ ಕೋರಿ ಅಹಮದಾಬಾದಿನಲ್ಲಿ ಪಟೇಲ್ ಸಮುದಾಯ ಬೃಹತ್ ರ್ಯಾಲಿ ನಡೆಸಿದೆ.

ಪಟೇಲ್ ಮುಖಂಡರು ಬಂಧ್ ಕರೆದಿರುವುದರಿಮ್ದ ಅಲ್ಲದೆ  ಪೊಲೀಸರು ಕೆಲವು ಮುಖ್ಯ ರಸ್ತೆಗಳಿಗೆ ಯಾರೂ ಬರದಂತೆ ನಿರ್ಬಂಧ ಹೇರಿರುವುದರಿಂದ ಹಾಗು ಜನಕ್ಕೆ ಅಗತ್ಯ ಇರದ ಹೊರತು ಮನೆಯಿಂದ ಹೊರಬೀಳದಂತೆ ಸೂಚಿಸಿರುವುದು ಗುಜರಾತಿನ ವಾಣಿಜ್ಯ ರಾಜಧಾನಿ ಅಹಮದಾಬದನ್ನು ಸ್ತಬ್ಧಗೊಳಿಸಿದೆ.

'ಪಾಟಿದಾರ್ ಅನಾಮತ್ ಆಂದೋಲನ ಸಮಿತಿ'ಯ ಸಂಚಾಲಕ ಹಾರ್ದಿಕ್ ಪಟೇಲ್ ಅವರು ತಿಳಿಸಿರುವಂತೆ ಜಿ ಎಂ ಡಿ ಸಿ ಮೈದಾನದಲ್ಲಿ 'ಮಾಹಾ ಕ್ರಾಂತಿ ರ್ಯಾಲಿ' ನಡೆಯಲಿದೆ ಎಂದಿದ್ದಾರೆ.

"ಇಲ್ಲಿನ ಪ್ರದೇಶಿಕ ನಿವಾಸಿಗಳಿಗೆ ತೊಂದರೆಯಾಗದಂತೆ ನಗರದಲ್ಲಿ ಹಾಗೂ ಇಡೀ ಗುಜರಾತಿನಲ್ಲಿ ಸಂಪೂರ್ಣ ಬಂಧ್ ಗೆ ಕರೆ ನೀಡಿದ್ದೇವೆ. ನಾಳೆ ಕೂಡ ಶಾಲೆ ಕಾಲೇಜು ಮತ್ತು ಅಂಗಡಿಗಳನ್ನು ತೆರೆಯದಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

ಹಿಂದುಳಿದ ವರ್ಗದಡಿ ಪಟೇಲ್ ಸಮುದಾಯವನ್ನು ಸೇರಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಆನಂದಿಬೇನ್ ಪಟೇಲ್ ಅವರು ತಿಳಿಸಿ ಮಾತುಕತೆಗೆ ಬರುವಂತೆ ಮುಖಂಡರಿಗೆ ಮನವಿ ಮಾಡಿದ್ದರೂ ಕೂಡ ಪಟೇಲ್ ಸಮುದಾಯ ಪಟ್ಟು ಸಡಿಲಿಸಲು ನಿರಾಕರಿಸಿದೆ.

ರಾಜ್ಯದಾದ್ಯಂತ ಪೊಲೀಸರು ಬಿಗಿ ಭದ್ರತೆಗೆ ಮುಂದಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT