ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ 
ಪ್ರಧಾನ ಸುದ್ದಿ

ಪಟೇಲ್ ಗಳಿಗೆ ಮೀಸಲಾತಿ ಸಿಗುವುದಾದರೆ, ಮುಂದುವರೆದ ಜಾತಿಗಳಿಗೂ ನೀಡಿ: ಕಾಂಗ್ರೆಸ್

ಇತರೆ ಹಿಂದುಳಿದ ವರ್ಗದಡಿ ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆ ಸಮುದಾಯ ಪ್ರತಿಭಟನೆ ನಡೆಸುವುದಾದರೆ ಮುಂದುವರೆದ ಜಾತಿಗಳಾದ ಬ್ರಾಹ್ಮಣ, ರಜಪೂತ

ನವದೆಹಲಿ: ಇತರೆ ಹಿಂದುಳಿದ ವರ್ಗದಡಿ ಪಟೇಲ್ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆ ಸಮುದಾಯ ಪ್ರತಿಭಟನೆ ನಡೆಸುವುದಾದರೆ ಮುಂದುವರೆದ ಜಾತಿಗಳಾದ ಬ್ರಾಹ್ಮಣ, ರಜಪೂತ ಇವನ್ನು ಕಡೆಗಣಿಸುವುದೇಕೆ ಎಂದು ಕಾಂಗ್ರೆಸ್ ಪಕ್ಷ ಬುಧವಾರ ಹೇಳಿದೆ.

"ಆರ್ಥಿಕವಾಗಿ ಸಬಲವಾಗಿರುವ, ರಾಜಕೀಯವಾಗಿ ಪ್ರಬಲವಾಗಿರುವ ಹಾಗೂ ಸಾಮಾಜಿಕವಾಗಿ ಮುಂದುವರೆದ ಸಮುದಾಯಗಳು ಮೀಸಲಾತಿ ಕೇಳುತ್ತಿವೆ, ಹೀಗಿರುವಾಗ ಮುಂದುವರೆದ ಜಾತಿಗಳಾದ ಬ್ರಾಹ್ಮಣರನ್ನು, ರಜಪೂತರನ್ನು ಮತ್ತು ಭೂಮಿಹಾರರನ್ನು ಬಿಡುವುದೇಕೆ" ಎಂದು ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಹೇಳಿದ್ದಾರೆ.

"ಪಟೇಲ್ ಗಳು, ಜಾಟ್ ಗಳು, ರೆಡ್ಡಿಗಳು ಹಾಗೂ ಇನ್ನಿತರ ಮೇಲ್ವರ್ಗದ ಸಮುದಾಯಗಳು ಮೀಸಲಾತಿ ಕೇಳುತ್ತಿದ್ದು ಅದನ್ನು ಯಾರೂ ವಿರೋಧಿಸುತ್ತಿಲ್ಲವಾದರೆ, ಉಳಿದ ಮುಂದುವರೆದ ಜನಾಗಂವನ್ನು ಕಡೆಗಣಿಸುವುದೇಕೆ" ಎಂದು ಕೂಡ ಅವರು ಹೇಳಿದ್ದಾರೆ.

ದೇಶದಿಡೀ ಈ ಮೀಸಲಾತಿಯನ್ನು ಹೇಗೆ ನೀಡಲಾಗಿದೆ ಎಂದರೆ ಇಂದು ಬ್ರಾಹ್ಮಣರು, ರಜಪೂತರು ಮತ್ತು ಭೂಮಿಹಾರ್ ಗಳು ನಿಜವಾದ ಹಿಂದುಳಿದ ವರ್ಗಗಳಾಗಿವೆ ಎಂದು ಕೂಡ ತಿವಾರಿ ಹೇಳಿದ್ದಾರೆ.

ಮೀಸಲಾತಿಯ ಇಡೀ ತಳಹದಿಯನ್ನು ಮತ್ತೆ ಚರ್ಚಿಸುವ ಸಮಯ ಬಂದಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ನರೇಂದ್ರ ಮೋದಿ ಗುಜರಾತಿನ ಮುಖ್ಯಮಂತ್ರಿಗಳಾಗಿದ್ದಾಗ, ಅವರು ಹೇಳಿಕೊಳ್ಳುತ್ತಿದ್ದ ಅಭಿವೃದ್ಧಿ ಮಾದರಿ ವಿಫಲವಾಗಿರುವುದೇ ಇಂದು ಪಟೇಲ್ ಸಮುದಾಯ ಈ ಪ್ರತಿಭಟನೆಗೆ ಇಳಿದಿರುವುದಕ್ಕೆ ಕಾರಣ ಎಂದು ತಿವಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT