ಕಾಶ್ಮೀರ ಪ್ರತ್ಯೇಕವಾದಿ ಮುಖಂಡ ಶಬೀರ್ ಅಹ್ಮದ್ ಷಾ 
ಪ್ರಧಾನ ಸುದ್ದಿ

ಭಾರತಕ್ಕೆ ಭಗತ್ ಸಿಂಗ್ ನಂತೆ ಕಾಶ್ಮೀರಕ್ಕೆ ಭಯೋತ್ಪಾದಕರು ಹೀರೋಗಳು: ಪ್ರತ್ಯೇಕವಾದಿ ಷಾ

ಕಾಶ್ಮೀರ ವಿವಾದವನ್ನು ಬಗೆಹರಿಸುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸನ್ನು ಪ್ರಧಾನಿ ನರೇಂದ್ರ ಮೋದಿ ಕೊಂದು ಹಾಕಿದ್ದಾರೆ ಎಂದು

ಶ್ರೀನಗರ: ಕಾಶ್ಮೀರ ವಿವಾದವನ್ನು ಬಗೆಹರಿಸುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸನ್ನು ಪ್ರಧಾನಿ ನರೇಂದ್ರ ಮೋದಿ ಕೊಂದು ಹಾಕಿದ್ದಾರೆ ಎಂದು ಆರೋಪಿಸಿರುವ ಪ್ರತ್ಯೇಕವಾದಿ ಮುಖಂಡ ಶಬೀರ್ ಅಹ್ಮದ್ ಷಾ, ಭಾರತಕ್ಕೆ ಭಗತ್ ಸಿಂಗ್ ಹೇಗೆ ಹೀರೋ ಆಗಿದ್ದಾರೋ ಹಾಗೆಯೇ ಭಯೋತ್ಪಾದಕರು ಕಾಶ್ಮೀರಿಗಳಿಗೆ ಹೀರೋಗಳು" ಎಂದು ಸೋಮವಾರ ಹೇಳಿದ್ದಾರೆ.

"ಭಾರತ ಭಗತ್ ಸಿಂಗ್ ಅವರನ್ನು ಸಂಭ್ರಮಿಸುವ ಹಾಗೆ, ಭಯೋತ್ಪಾದಕರು ನಮ್ಮ ಹೀರೋಗಳು" ಎಂದು ಪಾಕಿಸ್ತಾನದ ರಕ್ಷಣಾ ಸಲಹೆಗಾರ ಸತ್ರಾಜ್ ಅಜೀಜ್ ಅವರನ್ನು ಭೇಟಿಮಾಡಲು ದೆಹಲಿಗೆ ತೆರಳಿದ್ದಾಗ ಎರಡು ದಿನಗಳವರೆಗೆ ಬಂಧನಕ್ಕೆ ಒಳಗಾಗಿದ್ದ ಶಬೀರ್ ಕಾಶ್ಮೀರಕ್ಕೆ ಹಿಂದಿರುಗಿ ಹೇಳಿದ್ದಾರೆ. ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ಭದ್ರತಾ ಸಂಸ್ಥೆಗಳ ಮಾತುಕತೆ ಮುರಿಯುವುದಕ್ಕೆ ನೀವು ಕಾರಣ ಎಂದದ್ದಕೆ " ನೀವು ನನ್ನನು ದೂರುತ್ತಿರುವುದು ಆಶ್ಚರ್ಯಕರವಾಗಿದೆ" ಎಂದಿದ್ದಾರೆ.

ವಾಜಪೇಯಿ ಅವರ ಕಾಶ್ಮೀರಿ ನೀತಿ 'ಗತಕಾಲದ ಸಂಗತಿ' ಎಂದಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಹೇಳಿಕೆಯನ್ನು ದುರದೃಷ್ಟಕರ ಎಂದಿರುವ ಅವರು ಮಾಜಿ ಪ್ರಧಾನಿಯವರ ಆಡಳಿತದ ಸಮಯದಲ್ಲಿ ಕಾಶ್ಮೀರ ವಿವಾದ ಮಾತುಕತೆಯಲ್ಲಿ ಪ್ರತ್ಯೇಕವಾದಿಗಳು ಭಾಗವಾಗಿದ್ದರು ಎಂದಿದ್ದಾರೆ.

ಕಾಶ್ಮೀರ ವಿವಾದದ ಬಗ್ಗೆ ಪಾಕಿಸ್ತಾನದ ನಿಲುವನ್ನು ಪ್ರಶಂಸಿಸಿರುವ ಅವರು, ಭಾರತ ನಿರಾಕರಿಸುವ ಮನಸ್ಥಿತಿಯಿಂದ ಹೊರಬರಬೇಕು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT