ಬರ ಪರಿಸ್ಥಿತಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಇಡೀ ರಾಜ್ಯಕ್ಕೆ ಹಬ್ಬಿದ ಬರ

ರಾಜ್ಯದ 176 ತಾಲೂಕುಗಳ ಪೈಕಿ 150 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಬುಧವಾರ ಈ ವಿಷಯ ತಿಳಿಸಿದರು...

ಮೈಸೂರು: ರಾಜ್ಯದ 176 ತಾಲೂಕುಗಳ ಪೈಕಿ 150 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಬುಧವಾರ ಈ ವಿಷಯ ತಿಳಿಸಿದರು.

ಮೊದಲು ರಾಜ್ಯದಲ್ಲಿ 98 ತಾಲೂಕುಗಳು ಬರಪೀಡಿತ ಎಂದು ತೀರ್ಮಾನಿಸಲಾಗಿತ್ತು. ಆ ನಂತರ ಈ ಸಂಖ್ಯೆ 114ಕ್ಕೆ ಆಯಿತು. ಈಗ ಆ ಸಂಖ್ಯೆಯು 126ಕ್ಕೆ ಹೆಚ್ಚಳವಾಗಿದೆ. ಬಹುಶಃ ಈ ಸಂಖ್ಯೆಯು 150 ತಲುಪಬಹುದು. ಈ ಕುರಿತು ಆ. 27ರಂದು ವಿಧಾನಸೌಧದಲ್ಲಿ ನಡೆಯುವ ಬರ ಕುರಿತ ಸಂಪುಟ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದರು. ಬರ ಪರಿಹಾರಕ್ಕೆ ಸಂಬಂಧಿಸಿ ಕೇಂದ್ರದಿಂದ ಅನುದಾನ ಕೋರಲು ಮತ್ತೊಂದು ಸುತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ನಲವತ್ತು ವರ್ಷಗಳ ಬಳಿಕ ಈ ರೀತಿಯ ಬರದ ಸಂಕಷ್ಟ ಅನುಭವಿಸುವಂತಾಗಿದೆ. ಆದ್ದರಿಂದ ಕುಡಿಯುವ ನೀರು, ಜಾನುವಾರಿಗೆ ಮೇವು, ಕೃಷಿ ಕಾರ್ಮಿಕರಿಗೆ ಉದ್ಯೋಗ, ಬರಕ್ಕೆ ತುತ್ತಾದ ಬೆಳೆಗೆ ಅಗತ್ಯ ಪರಿಹಾರ ಕುರಿತು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದ್ದೇವೆ. ಸೆ. 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲಾ ಇಲಾಖೆಗಳ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಗಳ ಸಭೆ ನಡೆಸುವರು ಎಂದು ಅವರು ತಿಳಿಸಿದರು.

ಘೋಷಣೆಗೆ ಮಾನದಂಡಗಳೇನು?
ಸತತವಾರ ಮಳೆ ಆಗಿರಬಾರದು,  ನಿರ್ದಿಷ್ಟ ಅವಧಿಯಲ್ಲಿ ವಾಡಿಕೆಗಿಂತ ಶೇ.20 ರಷ್ಟು ಕಡಿಮೆ ಮಳೆ ಆಗಿರಬೇಕು, ಭೂಮಿಯಲ್ಲಿ ತೇವಾಂಶ ಕೊರತೆ, ಶೇ.50 ಕ್ಕಿಂತ ಕಡಿಮೆ ಇರಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT