ಬರ ಪರಿಸ್ಥಿತಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಇಡೀ ರಾಜ್ಯಕ್ಕೆ ಹಬ್ಬಿದ ಬರ

ರಾಜ್ಯದ 176 ತಾಲೂಕುಗಳ ಪೈಕಿ 150 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಬುಧವಾರ ಈ ವಿಷಯ ತಿಳಿಸಿದರು...

ಮೈಸೂರು: ರಾಜ್ಯದ 176 ತಾಲೂಕುಗಳ ಪೈಕಿ 150 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಬುಧವಾರ ಈ ವಿಷಯ ತಿಳಿಸಿದರು.

ಮೊದಲು ರಾಜ್ಯದಲ್ಲಿ 98 ತಾಲೂಕುಗಳು ಬರಪೀಡಿತ ಎಂದು ತೀರ್ಮಾನಿಸಲಾಗಿತ್ತು. ಆ ನಂತರ ಈ ಸಂಖ್ಯೆ 114ಕ್ಕೆ ಆಯಿತು. ಈಗ ಆ ಸಂಖ್ಯೆಯು 126ಕ್ಕೆ ಹೆಚ್ಚಳವಾಗಿದೆ. ಬಹುಶಃ ಈ ಸಂಖ್ಯೆಯು 150 ತಲುಪಬಹುದು. ಈ ಕುರಿತು ಆ. 27ರಂದು ವಿಧಾನಸೌಧದಲ್ಲಿ ನಡೆಯುವ ಬರ ಕುರಿತ ಸಂಪುಟ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದರು. ಬರ ಪರಿಹಾರಕ್ಕೆ ಸಂಬಂಧಿಸಿ ಕೇಂದ್ರದಿಂದ ಅನುದಾನ ಕೋರಲು ಮತ್ತೊಂದು ಸುತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ನಲವತ್ತು ವರ್ಷಗಳ ಬಳಿಕ ಈ ರೀತಿಯ ಬರದ ಸಂಕಷ್ಟ ಅನುಭವಿಸುವಂತಾಗಿದೆ. ಆದ್ದರಿಂದ ಕುಡಿಯುವ ನೀರು, ಜಾನುವಾರಿಗೆ ಮೇವು, ಕೃಷಿ ಕಾರ್ಮಿಕರಿಗೆ ಉದ್ಯೋಗ, ಬರಕ್ಕೆ ತುತ್ತಾದ ಬೆಳೆಗೆ ಅಗತ್ಯ ಪರಿಹಾರ ಕುರಿತು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದ್ದೇವೆ. ಸೆ. 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲಾ ಇಲಾಖೆಗಳ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಗಳ ಸಭೆ ನಡೆಸುವರು ಎಂದು ಅವರು ತಿಳಿಸಿದರು.

ಘೋಷಣೆಗೆ ಮಾನದಂಡಗಳೇನು?
ಸತತವಾರ ಮಳೆ ಆಗಿರಬಾರದು,  ನಿರ್ದಿಷ್ಟ ಅವಧಿಯಲ್ಲಿ ವಾಡಿಕೆಗಿಂತ ಶೇ.20 ರಷ್ಟು ಕಡಿಮೆ ಮಳೆ ಆಗಿರಬೇಕು, ಭೂಮಿಯಲ್ಲಿ ತೇವಾಂಶ ಕೊರತೆ, ಶೇ.50 ಕ್ಕಿಂತ ಕಡಿಮೆ ಇರಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT