ಪ್ರಧಾನ ಸುದ್ದಿ

ಬಿಬಿಎಂಪಿ ಗದ್ದುಗೆಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ?

ಸತತ ಎರಡನೇ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗದ್ದುಗೆ ಏರುವ ಕನಸು ಕಾಣುತ್ತಿದ್ದ ಬಿಜೆಪಿ ಪಕ್ಷದ ಕನಸಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಣ್ಣೀರೆರಚಲು ಸಿದ್ಧವಾಗಿವೆ...

ಬೆಂಗಳೂರು: ಸತತ ಎರಡನೇ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗದ್ದುಗೆ ಏರುವ ಕನಸು ಕಾಣುತ್ತಿದ್ದ ಬಿಜೆಪಿ ಪಕ್ಷದ ಕನಸಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಣ್ಣೀರೆರಚಲು ಸಿದ್ಧವಾಗಿವೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ, ಆಧಿಕಾರದ ಕನಸು ಕಾಣುತ್ತಿರುವ ಬಿಜೆಪಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಇದೀಗ ಬಿಬಿಎಂಪಿಯ ಆಡಳಿತ ಚುಕ್ಕಾಣಿ ಹಿಡಿಯಲು ಹವಣಸುತ್ತಿವೆ. ಇನ್ನು ಮೂಲಗಳ ಪ್ರಕಾರ ಈ ಬಗ್ಗೆ ಚರ್ಚಿಸಿಸಲು ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಜೆಡಿಎಸ್ ಪಕ್ಷದ ನಾಯಕರು ಖಾಸಗಿ ಹೊಟೆಲ್ ನಲ್ಲಿ ಸಭೆ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳು ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಖಾಸಗಿ ಹೊಟೆಲ್ ನಲ್ಲಿ ಚರ್ಚೆ
ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಶತಾಯಗತಯ ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ದೊಮ್ಮಲೂರು ಬಳಿ ಇರುವ ಖಾಸಗಿ ಹೊಟೆಲ್ ನಲ್ಲಿ ಪಕ್ಷೇತರರೊಂದಿಗೆ ಸಭೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ನ ಚೆಲುವನಾರಾಯಣ ಸ್ವಾಮಿ, ಜಮೀರ್ ಅಹಮದ್ ಖಾನ್, ಟಿಎ ಶರವಣ ಹಾಗೂ ಕಾಂಗ್ರೆಸ್ ನ ಕೆಲ ಸಚಿವರು ಸೇರಿ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮೈತ್ರಿ ಬಗ್ಗೆ ಬಾಯಿ ಬಿಡದ ನಾಯಕರು
ಇನ್ನು ಬಿಬಿಎಂಪಿ ಅಧಿಕಾರದ ಗದ್ದುಗೆ ಹಿಡಿಯುವ ಕುರಿತು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಡುವೆ ನಡೆಯುತ್ತಿರುವ ಮೈತ್ರಿ ಕುರಿತು ಎರಡೂ ಪಕ್ಷಗಳ ನಾಯಕರು ಯಾವುದೇ ರೀತಿಯ ಸುಳಿವುಗಳನ್ನು ನೀಡುತ್ತಿಲ್ಲ. ಬದಲಿಗೆ ತಮಗೇನೂ ತಿಳಿದಿಲ್ಲವೆನ್ನುವಂತೆ ವರ್ತಿಸುತ್ತಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತ್ರಿ ಕುರಿತಂತೆ ತಮಗೆ ಯಾವುದೇ ರೀತಿಯ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಮೈತ್ರಿಗೆ ಗೌಡರ ಸಮ್ಮತಿ: ಶಾಸಕ ಜಮೀರ್ ಅಹ್ಮದ್ ಖಾನ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಕೋಮುವಾದಿಗಳಿಂದ ದೂರವಿಡಲು ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಚಾಮರಾಜಪೇಟೆ ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರು ಮಹಾನಗರ ಪಾಲಿಕೆಯನ್ನು ಕೋಮುವಾದಿಗಳಿಂದ ದೂರವಿಡಲು ಜೆಡಿಎಸ್ ನಿರ್ಧರಿಸಿದೆ. ಈ ಬಗ್ಗೆ ಪಕ್ಷದ ವರಿಷ್ಠರಾದ ಎಚ್ ಡಿ ದೇವೇಗೌಡ ಅವರೊಂದಿಗೂ ಚರ್ಚಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಮೈತ್ರಿ ಕುರಿತಂತೆ ಆಹ್ವಾನ ಬಂದಿದೆ. ಹೀಗಾಗಿ ಇಂದು ಸಂಜೆ 6 ಗಂಟೆಗೆ ಸಭೆ ಕರೆಯಲಾಗಿದ್ದು, ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

198 ಸದಸ್ಯ ಬಲದ ಬಿಬಿಎಂಪಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನ, ಕಾಂಗ್ರೆಸ್ 76, ಜೆಡಿಎಸ್ 14 ಮತ್ತು ಪಕ್ಷೇತರರು 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು. ಸಂಸದರು, ಶಾಸಕರು ಸೇರಿ ಮೇಯರ್ ಆಯ್ಕೆಗೆ 250 ಜನಪ್ರತಿನಿಧಿಗಳು ಮತ ಚಲಾಯಿಸಬೇಕಿದ್ದು, 126 ಮತ ಗಳಿಸಿದ ಅಭ್ಯರ್ಥಿ ಬಿಬಿಎಂಪಿ ಮೇಯರ್ ಆಗೆ ಆಯ್ಕೆಯಾಗಲಿದ್ದಾರೆ. ಪಕ್ಷದವರು ಮೇಯರ್ ಆಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬಯಿ ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ರಿತು ತಾವಡೆ ಆಯ್ಕೆ

India-US ವ್ಯಾಪಾರ ಒಪ್ಪಂದ 'ಮೇಕ್ ಇನ್ ಇಂಡಿಯಾ' ಬಲಪಡಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

India-US ಮಧ್ಯಂತರ ವ್ಯಾಪಾರ ಒಪ್ಪಂದ; ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ICC Men’s T20 World Cup 2026: ಸತತ 2ನೇ ಬಾರಿಗೆ ಯಾವ ತಂಡವೂ ಟ್ರೋಫಿ ಗೆದ್ದಿಲ್ಲ; ಅಸಾಧ್ಯವಾದುದ್ದನ್ನು ಸಾಧಿಸುತ್ತಾ ಭಾರತ?

ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡು

SCROLL FOR NEXT