ಬಿಬಿಎಂಪಿ: ಬಿಜೆಪಿಗೆ ಮೋದಿಯೇ ಬ್ರಹ್ಮಾಸ್ತ್ರ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಬಿಬಿಎಂಪಿ: ಬಿಜೆಪಿಗೆ ಮೋದಿಯೇ ಬ್ರಹ್ಮಾಸ್ತ್ರ

ಬಿಬಿಎಂಪಿಯಲ್ಲಿ ಹೇಗಾದರೂ ಬಿಜೆಪಿಯನ್ನು ದೂರ ಇಡಬೇಕೆಂದು ಕಾಂಗ್ರೆಸ್ ಹೋರಾಟ ನಡೆಸುತ್ತಿರುವಾಗಲೇ, ಬಿಜೆಪಿ ಸಹ ತಾನು ಮೇಯರ್ ಗಿರಿ ಉಳಿಸಿಕೊಳ್ಳಲು ಎಲ್ಲಾ ರೀತಿಯ ರಣತಂತ್ರಗಳನ್ನೂ ರೂಪಿಸುತ್ತಲೇ ಇದೆ...

ಬೆಂಗಳೂರು: ಬಿಬಿಎಂಪಿಯಲ್ಲಿ ಹೇಗಾದರೂ ಬಿಜೆಪಿಯನ್ನು ದೂರ ಇಡಬೇಕೆಂದು ಕಾಂಗ್ರೆಸ್ ಹೋರಾಟ ನಡೆಸುತ್ತಿರುವಾಗಲೇ, ಬಿಜೆಪಿ ಸಹ ತಾನು ಮೇಯರ್ ಗಿರಿ ಉಳಿಸಿಕೊಳ್ಳಲು
ಎಲ್ಲಾ ರೀತಿಯ ರಣತಂತ್ರಗಳನ್ನೂ ರೂಪಿಸುತ್ತಲೇ ಇದೆ.

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರು ಶನಿವಾರ ಬೆಳಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೆಗೌಡರನ್ನು ಅವರ ನಿವಾಸದಲ್ಲೇ ಭೇಟಿಯಾಗಿದ್ದು ಅದರ ಮೊದಲ ಹಂತವಾಗಿತ್ತು. ಆದರೆ, ಗೌಡರು ಸ್ಪಷ್ಟ ಭರವಸೆ ನೀಡಲಿಲ್ಲ. ಈ ಕುರಿತು ನಂತರ, ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ನಾಯಕರ ಸಭೆಯಲ್ಲಿ ಪರೋಕ್ಷ ಆಕ್ರೋಶವೂ ವ್ಯಕ್ತವಾಯಿತು.

ಎರಡನೇ ಹಂತದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್‍ಸಿಂಗ್ ನೇರವಾಗಿ ದೇವೇಗೌಡರಿಗೆ ಕರೆ ಮಾಡಿದ್ದಾರೆ. ಭವಿಷ್ಯದ ಚುನಾವಣೆ ದೃಷ್ಟಿಯಿಂದ ಮತ್ತು ಅವಕಾಶಗಳ ಬಗ್ಗೆ ಚರ್ಚಿಸಿದ್ದಾರೆ. ಈ ಹಂತದಲ್ಲಾದರೂ ಜೆಡಿಎಸ್ ಕಡೆಯಿಂದ ಧನಾತ್ಮಕ ಪ್ರತಿಕ್ರಿಯೆ ಬರುತ್ತದೆಂದು ನಿರೀಕ್ಷಿಸಿದ್ದರು. ಆದರೂ ಜೆಡಿಎಸ್ ತನ್ನ ಕಾರ್ಪೊಟರ್‍ಗಳನ್ನು ರೆಸಾರ್ಟ್‍ಗೆ ಕರೆದೊಯ್ದಿರುವ ಹಿನ್ನೆಲೆಯಲ್ಲಿ ಆ ಪ್ರಯತ್ನ ಕೂಡ ಯಶಸ್ಸು ಸಿಗದೇ ಹೋಯಿತು.

ಹಾಗಂತ ಬಿಜೆಪಿ ಸುಮ್ಮನೇ ಕೂತಿಲ್ಲ. ಕೊನೆಯ ಅಸ್ತ್ರವಾಗಿ ಮೋದಿ ಎಂಬ ಬ್ರಹ್ಮಾಸ್ತ್ರ ಪ್ರಯೋಗಿಸಲು ನಿರ್ಧರಿಸಿದೆ. ಈ ಅಸ್ತ್ರ ಪ್ರಯೋಗವಾದರೆ ಈವರೆಗೆ ನಡೆದಿರುವ ಎಲ್ಲಾ ಬೆಳವಣಿಗೆಗಳೂ ಬದಲಾಗಲಿವೆ ಎಂಬ ನಂಬಿಕೆ ಅದಕ್ಕಿದೆ. ಅಂದರೆ, ಬಿಬಿಎಂಪಿಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಖುದ್ದು ಪ್ರಧಾನಿ ನರೇಂದ್ರ ಮೋದಿಯವರು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರಿಗೆ ಕರೆ ಮಾಡುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ.

ಶನಿವಾರವೇ ಮೋದಿಯವರ ಕರೆ ಬರಬಹುದೆಂದು ಊಹಿಸಲಾಗಿತ್ತು. ಆದರೆ, ರಾತ್ರಿಯವರೆಗೆ ಮೋದಿಯವರ ಕರೆ ಬಂದಿಲ್ಲ ಎಂದು ಜೆಡಿಎಸ್ ಮೂಲಗಳು ಖಚಿತಪಡಿಸಿವೆ. ಆ ಒಂದು ಫೋನ್ ಕರೆ, ಇದುವರೆಗಿನ ಎಲ್ಲಾ ಲೆಕ್ಕಾಚಾರಗಳನ್ನು ಬದಲಿಸಲಿದೆ ಎಂಬ ನಂಬಿಕೆ ಬಿಜೆಪಿಗೆ ಮಾತ್ರವಲ್ಲ, ಜೆಡಿಎಸ್‍ನ ಕೆಲ ನಾಯಕರಲ್ಲೂ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT