ಡಾ.ಎಂಎಂ ಕಲಬುರ್ಗಿ ಅವರ ಪಾರ್ಥೀವ ಶರೀರಕ್ಕೆ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಕಲಬುರ್ಗಿ ಹತ್ಯೆ: ಸಿಬಿಐಗೆ ವಹಿಸಲು ಸರ್ಕಾರ ಚಿಂತನೆ?

ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ಕೊಡಿ ಎಂದು ಮಠಾಧೀಶರು ಒತ್ತಾಯಿಸುತ್ತಿದ್ದು, ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...

ಧಾರವಾಡ: ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ಕೊಡಿ ಎಂದು ಮಠಾಧೀಶರು ಒತ್ತಾಯಿಸುತ್ತಿದ್ದು, ಈ ಕುರಿತು ಚರ್ಚಿಸಿ  ನಿರ್ಧಾರ  ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಲಬುರ್ಗಿ ಅವರ ಹತ್ಯೆ ಕುರಿತು ಸದ್ಯ ವಿಶೇಷ ಪೊಲೀಸ್ ತಂಡವನ್ನು ರಚಿಸಿ ತನಿಖೆ ನಡೆಸಲಾಗುತ್ತಿದೆ. ಅಗತ್ಯ ಬಿದ್ದರೆ ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ನೀಡಲಾಗುವುದು ಎಂದರು. ಈ  ಹಿಂದೆಯೇ ಅವರ ಮೇಲೆ ದಾಳಿ ನಡೆಯಬಹುದೆಂಬ ಕಾರಣದಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.  ಸಾರ್ವಜನಿಕ ಜೀವನದಲ್ಲಿ ನಾನೆಂದು ಯಾರಿಗೂ ಅನ್ಯಾಯ ಮಾಡಿಲ್ಲ.  ನನಗೇಕೆ ಬಂದೋಬಸ್ತ್ ಎಂದು ಒಂದು ವರ್ಷದ ಹಿಂದಷ್ಟೇ ಅವರ ಮನೆಗೆ ನೀಡಿದ ರಕ್ಷಣೆಯನ್ನು ಬೇಡ ಎಂದು ಅವರೇ ಹೇಳಿದ್ದರು.  ಒಂದು ವೇಳೆ ಪೊಲೀಸ್ ರಕ್ಷಣೆ ಈಗಲೂ ಇದ್ದಿದ್ದರೆ ಅವರು  ಉಳಿಯಬಹುದಿತ್ತೇನೋ ಎಂದರು.

ಹತ್ಯೆ ನಡೆದ ಕ್ಷಣಗಳು...
-ಸಮಯ: 8.36am

ಕಲಬುರ್ಗಿ ಮನೆ ಬಾಗಿಲು ತಟ್ಟಿದ ಅಪರಿಚಿತ
-ಸಮಯ: 8.37am
ಸದ್ದು ಕೇಳಿ ಬಾಗಿಲು ತೆರೆದ ಕಲಬುರ್ಗಿ ಪತ್ನಿ
-ಸಮಯ: 8.40am
ಮನೆಯೊಳಗಿಂದ ಬಂದ ಕಲಬುರ್ಗಿ ಹಣೆಗೆ ಗುಂಡು ಹಾರಿಸಿದ ದುಷ್ಕರ್ಮಿಗಳು
-ಸಮಯ: 8.41am
ಗುಂಡು ಹಾರಿಸಿದ ಬಳಿಕ ಬೈಕ್ ಏರಿ ಪರಾರಿಯಾದ ಅಪರಿಚಿತರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT