ಡಾ.ಎಂಎಂ ಕಲಬುರ್ಗಿ ಅವರ ಪಾರ್ಥೀವ ಶರೀರಕ್ಕೆ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಕಲಬುರ್ಗಿ ಹತ್ಯೆ: ಸಿಬಿಐಗೆ ವಹಿಸಲು ಸರ್ಕಾರ ಚಿಂತನೆ?

ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ಕೊಡಿ ಎಂದು ಮಠಾಧೀಶರು ಒತ್ತಾಯಿಸುತ್ತಿದ್ದು, ಈ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...

ಧಾರವಾಡ: ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ಕೊಡಿ ಎಂದು ಮಠಾಧೀಶರು ಒತ್ತಾಯಿಸುತ್ತಿದ್ದು, ಈ ಕುರಿತು ಚರ್ಚಿಸಿ  ನಿರ್ಧಾರ  ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಲಬುರ್ಗಿ ಅವರ ಹತ್ಯೆ ಕುರಿತು ಸದ್ಯ ವಿಶೇಷ ಪೊಲೀಸ್ ತಂಡವನ್ನು ರಚಿಸಿ ತನಿಖೆ ನಡೆಸಲಾಗುತ್ತಿದೆ. ಅಗತ್ಯ ಬಿದ್ದರೆ ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ನೀಡಲಾಗುವುದು ಎಂದರು. ಈ  ಹಿಂದೆಯೇ ಅವರ ಮೇಲೆ ದಾಳಿ ನಡೆಯಬಹುದೆಂಬ ಕಾರಣದಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.  ಸಾರ್ವಜನಿಕ ಜೀವನದಲ್ಲಿ ನಾನೆಂದು ಯಾರಿಗೂ ಅನ್ಯಾಯ ಮಾಡಿಲ್ಲ.  ನನಗೇಕೆ ಬಂದೋಬಸ್ತ್ ಎಂದು ಒಂದು ವರ್ಷದ ಹಿಂದಷ್ಟೇ ಅವರ ಮನೆಗೆ ನೀಡಿದ ರಕ್ಷಣೆಯನ್ನು ಬೇಡ ಎಂದು ಅವರೇ ಹೇಳಿದ್ದರು.  ಒಂದು ವೇಳೆ ಪೊಲೀಸ್ ರಕ್ಷಣೆ ಈಗಲೂ ಇದ್ದಿದ್ದರೆ ಅವರು  ಉಳಿಯಬಹುದಿತ್ತೇನೋ ಎಂದರು.

ಹತ್ಯೆ ನಡೆದ ಕ್ಷಣಗಳು...
-ಸಮಯ: 8.36am

ಕಲಬುರ್ಗಿ ಮನೆ ಬಾಗಿಲು ತಟ್ಟಿದ ಅಪರಿಚಿತ
-ಸಮಯ: 8.37am
ಸದ್ದು ಕೇಳಿ ಬಾಗಿಲು ತೆರೆದ ಕಲಬುರ್ಗಿ ಪತ್ನಿ
-ಸಮಯ: 8.40am
ಮನೆಯೊಳಗಿಂದ ಬಂದ ಕಲಬುರ್ಗಿ ಹಣೆಗೆ ಗುಂಡು ಹಾರಿಸಿದ ದುಷ್ಕರ್ಮಿಗಳು
-ಸಮಯ: 8.41am
ಗುಂಡು ಹಾರಿಸಿದ ಬಳಿಕ ಬೈಕ್ ಏರಿ ಪರಾರಿಯಾದ ಅಪರಿಚಿತರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT