ದೆಹಲಿ ಸಂಗಮ್ ವಿಹಾರ್ ನ ಶಾಸಕ ಪಂಕಜ್ ಪುಷ್ಕರ್ 
ಪ್ರಧಾನ ಸುದ್ದಿ

ದೆಹಲಿ ಸರ್ಕಾರದ ವಿರುದ್ಧ ಎಎಪಿ ಶಾಸಕ ಪ್ರತಿಭಟನೆ

ದೆಹಲಿ ಆಮ್ ಆದ್ಮಿ ಪಕ್ಷದ ಸರ್ಕಾರದ ವಿರುದ್ಧ ಅದೇ ಪಕ್ಷದ ಸಂಗಮ್ ವಿಹಾರ್ ನ ಶಾಸಕ ಪಂಕಜ್ ಪುಷ್ಕರ್, ತಮ್ಮ ಕ್ಷೇತ್ರದಲ್ಲಿ ಡೆಂಗ್ಯೂ ಇಂದ ಸಾವಿಗೀಡಾಗುತ್ತಿರುವ ಜನರ

ನವದೆಹಲಿ: ದೆಹಲಿ ಆಮ್ ಆದ್ಮಿ ಪಕ್ಷದ ಸರ್ಕಾರದ ವಿರುದ್ಧ ಅದೇ ಪಕ್ಷದ ಸಂಗಮ್ ವಿಹಾರ್ ನ ಶಾಸಕ ಪಂಕಜ್ ಪುಷ್ಕರ್, ತಮ್ಮ ಕ್ಷೇತ್ರದಲ್ಲಿ ಡೆಂಗ್ಯೂ ಇಂದ ಸಾವಿಗೀಡಾಗುತ್ತಿರುವ ಜನರ ಕುಟುಂಬಗಳ ಬೇಡಿಕೆಗಳಿಗೆ ಮನ್ನಣೆ ನೀಡದಿರುವುದಕ್ಕೆ ಪ್ರತಿಭಟನೆ ನಡೆಸಿದ್ದಾರೆ.

"ಜನರು ಡೆಂಗ್ಯೂ ಇಂದ ಸಾವಿಗೀಡಾಗುತ್ತಿರುವುದರಿಂದ ಸಂಗಂ ವಿಹಾರ್ ಕ್ಷೇತ್ರಕ್ಕೆ ಅವಮಾನವಾಗಿದೆ. ಆಡಳಿತ ಇದರ ಬಗ್ಗೆ ಯಾವುದೇ ಗಮನ ಹರಿಸುತ್ತಿಲ್ಲ. ಸರ್ಕಾರಕ್ಕೆ ಇದರತ್ತ ಗಮನ ಹರಿಸುವಂತೆ ಹೇಳುವುದು ನನ್ನ ಕರ್ತವ್ಯ" ಎಂದು ಪುಷ್ಕರ್ ಹೇಳಿದ್ದಾರೆ.

ನಾನು ಯಾರ ವಿರುದ್ಧವೂ ಹೋಗಿಲ್ಲ ಆದರೆ ರಾಜ್ಯ ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರ ನೀಡಲಾಗಿಲ್ಲ ಎಂದು ಕೂಡ ಅವರು ತಿಳಿಸಿದ್ದಾರೆ.

ಸರ್ಕಾರ ಜಾಹಿರಾತು ಸಂಸ್ಥೆಯಲ್ಲ ಬದಲಾಗಿ ಕಾಯಕ ಮಾಡುವ ಸಂಸ್ಥೆ ಎಂದಿರುವ ಅವರು ಸದರಿ ಸರ್ಕಾರ ಜನರನ್ನು ಕಡೆಗಣಿಸಿ ಜಾಹಿರಾತುಗಳ ಮೇಲೆ ಹೆಚ್ಚಿನ ಹಣ ವ್ಯಯಿಸುತ್ತಿದೆ ಎಂದು ದೂರಿದ್ದಾರೆ.

ನಾವು ಜಾಹೀರಾತಿನ ಮೇಲೆ ೫೩೦ ಕೋಟಿ ವ್ಯಯಿಸಿದ್ದೇವೆ. ಸಣ್ಣ ಸಣ್ಣ ಬೀದಿಗಳಲ್ಲೂ ಜಾಹೀರಾತು ನೋಡಬಹುದು, ಆದರೆ ಸಣ್ಣ ಸಣ್ಣ ಕೆಲಸಗಳನ್ನು ಮಾಡಿಲ್ಲ ಎಂದಿರುವ ಅವರು ದೆಹಲಿ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಬಗ್ಗೆ ಸೂಕ್ಷ್ಮತೆ ಇಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT