ಮಣಿಪುರ ಹಿಂಸಾಚಾರದ ಒಂದು ದೃಶ್ಯ 
ಪ್ರಧಾನ ಸುದ್ದಿ

ಮಣಿಪುರದಲ್ಲಿ ಹಿಂಸಾಚಾರ; ಮೂವರ ಸಾವು, ಹಲವರಿಗೆ ಗಾಯ

ರಾಜ್ಯ ವಿಧಾನಸಭೆ ಮೂರು ಕಾಯ್ದೆಗಳನ್ನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಮಣಿಪುರದಲ್ಲು ಗುಂಪು ಘರ್ಷಣೆ ಹಿಂಸಾಚಾರಕ್ಕಿಳಿದು ಮೂವರು ಮೃತಪಟ್ಟಿರುವ

ಇಂಫಾಲ್: ರಾಜ್ಯ ವಿಧಾನಸಭೆ ಮೂರು ಕಾಯ್ದೆಗಳನ್ನು ಮಂಜೂರು ಮಾಡಿದ ಹಿನ್ನಲೆಯಲ್ಲಿ ಮಣಿಪುರದಲ್ಲು ಗುಂಪು ಘರ್ಷಣೆ ಹಿಂಸಾಚಾರಕ್ಕಿಳಿದು ಮೂವರು ಮೃತಪಟ್ಟಿರುವ ವರದಿಯಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಚೂರಚಂದಾಪುರದಲ್ಲಿ ಸೋಮವಾರ ರಾತ್ರಿ ಈ ಗಲಭೆಗಳಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡಲು ಅನಿರ್ಧಿಷ್ಟ ಕಾಲಾವಧಿಯವರೆಗೆ ಅಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಮಣಿಪುರ ಜನರ ಸುರಕ್ಷತೆ ಕಾಯ್ದೆ ೨೦೧೫, ಮಣಿಪುರ ಭೂ ಕಂದಾಯ ಮತ್ತು ಜಮೀನು ಸುಧಾರಣೆ ಕಾಯ್ದೆ (ಏಳನೇ ತಿದ್ದುಪಡಿ) ೨೦೧೫ ಮತ್ತು ಮಣಿಪುರ ಅಂಗಂಡಿ ಮುಂಗಟ್ಟು ಕಾಯ್ದೆ (ಎರಡನೇ ತಿದ್ದುಪಡಿ) ೨೦೧೫ ಈ ಕಾಯ್ದೆಗಳನ್ನು ವಿಧಾನಸಭೆಯಲ್ಲಿ ಮಂಜೂರಾದ ನಂತರ ಇದರ ವಿರುದ್ಧ ಬುಡಕಟ್ಟು ವಿದ್ಯಾರ್ಥಿಗಳನ್ನು ಒಳಗೊಂಡ ಗುಂಪು ಪ್ರತಿಭಟನೆ ನಡೆಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಅಭಿವೃದ್ಧಿ ಸಚಿವ ತೋನ್ಸಿಂಗ್ ಅವರನ್ನೂ ಒಳಗೊಂಡಂತೆ ಈ ಗುಂಪು ಐದು ಜನ ಕಾಂಗ್ರೆಸ್ ರಾಜಕಾರಿಣಿಗಳ ಮನೆಗಳ ಮೇಲೆ ದಾಳಿ ಮಾಡಿದೆ. ಅಲ್ಲದೆ ಚೂರಚಂದಾಪುರ ಉಪಾಯುಕ್ತ ಅವರ ವಾಹನಕ್ಕೂ ಬೆಂಕಿ ಹಚ್ಚಿದ್ದು, ಗುಂಪನ್ನು ಚದುರಿಸಲು ಪೊಲೀಸ ಪಡೆಗಳು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಮಯದಲ್ಲಿ ಯಾವ ರಾಜಕಾರಿಣಿಯೂ ಅವರ ಮನೆಗಳಲ್ಲಿ ಇರಲಿಲ್ಲ. ಅವರೆಲ್ಲರೂ ವಿಶೇಷ ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸಲು ಇಂಫಾಲ್ ಗೆ ತೆರಳಿದ್ದರು.

ಈ ಮಂಜೂರಾದ ಕಾಯ್ದೆಗಳು, ಬುಡಕಟ್ಟು ಜನರ ರಕ್ಷಣೆಗಾಗಿ ಇರುವ ಮಣಿಪುರ ಬುಡಕಟ್ಟು ನಿರ್ದೇಶನ ಕಾಯ್ದೆ ೧೯೪೭ ಕ್ಕೆ ವಿರುದ್ಧವಾಗಿವೆ ಎಂದು ದೂರಿ ಬುಡಕಟ್ಟು ನಾಗರಿಕ ಸಮಿತಿ ಗುಂಪುಗಳು ಇವನ್ನು ವಿರೋಧಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT