ಭಾರಿ ಮಳೆ ತತ್ತರಿಸಿದ ಚೆನ್ನೈ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಮಳೆ ಸುದ್ದಿಗೇ ಹೆಚ್ಚಿನ ಆದ್ಯತೆ ಕೊಡಿ: ಕೇಂದ್ರ ಸರ್ಕಾರ

ತಮಿಳುನಾಡಿನಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಖಾಸಗಿ ಸುದ್ದಿ ವಾಹಿನಿಗಳು, ಆಕಾಶವಾಣಿ ಮತ್ತು ದೂರದರ್ಶನಕ್ಕೆ ಮಹತ್ವದ ಸೂಚನೆ ನೀಡಿದೆ...

ನವದೆಹಲಿ: ತಮಿಳುನಾಡಿನಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಖಾಸಗಿ ಸುದ್ದಿ ವಾಹಿನಿಗಳು, ಆಕಾಶವಾಣಿ ಮತ್ತು ದೂರದರ್ಶನಕ್ಕೆ ಮಹತ್ವದ  ಸೂಚನೆ ನೀಡಿದೆ.

ಈ ಬಗ್ಗೆ ಸಚಿವಾಲಯದ ಜಂಟಿ ಕಾರ್ಯದರ್ಶಿ ಆರ್.ಜಯಾ ಮನವಿ ಮಾಡಿದ್ದು, ಎಲ್ಲ ಖಾಸಗಿ ವಾಹಿನಿಗಳು ಮತ್ತು ಸರ್ಕಾರಿ ಸ್ವಾಮ್ಯದ ಚಾನೆಲ್‍ಗಳು ಆಗಾಗ ಈ ಬಗ್ಗೆ ಆದ್ಯತೆಯ ಮೇರೆಗೆ  ಮಾಹಿತಿ ನೀಡುತ್ತಿರಬೇಕು. ಸದ್ಯ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ವಾಹಿನಿಗಳು ಆಗಾಗ ಚೆನ್ನೈ ಮತ್ತು ತಮಿಳುನಾಡಿನ ಜನರಿಗೆ ಮಳೆಯಿಂದ ಉಂಟಾದ ತೊಂದರೆ ಮತ್ತು ಸಂಭಾವ್ಯ  ಎಚ್ಚರಿಕೆಯನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕೇಂದ್ರ ಜತೆ ನೆರವಾಗಬೇಕು. ಈ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಗುವ ನಷ್ಟವನ್ನು ತಡೆಯುವಲ್ಲಿ ಸಹಕರಿಸಬೇಕು ಎಂದು ಅವರು ಮನವಿ  ಮಾಡಿದ್ದಾರೆ.

ಪ್ರಕಟವಾಗಲಿಲ್ಲ ಪತ್ರಿಕೆ
ದೇಶದ ಹಳೆ ಪತ್ರಿಕೆ `ದಿ ಹಿಂದೂ' ಚೆನ್ನೈ ಆವೃತ್ತಿ ಮಳೆಯ ಪರಿಣಾಮ ಬುಧವಾರ ಪ್ರಕಟಗೊಳ್ಳಲಿಲ್ಲ. 137 ವರ್ಷಗಳ ಈ ಪತ್ರಿಕೆ ಇತಿಹಾಸದಲ್ಲೇ ಪ್ರಥಮ ಬಾರಿಗೆ ಮುದ್ರಣ ಸ್ಥಗಿತವಾಗಿದೆ. ಇದೇ  ಮೊದಲ ಬಾರಿಗೆ ಹೀಗಾಗುತ್ತಿದೆ ಎಂದು ಪತ್ರಿಕೆಯ ಪ್ರಕಾಶಕ ಎನ್.ಮುರಳಿ ಬಿಬಿಸಿಗೆ ತಿಳಿಸಿದ್ದಾರೆ. ಪತ್ರಿಕೆ ಕಚೇರಿ ಇರುವ ಮರೈಮಲೈನಗರ್ ಪ್ರದೇಶಕ್ಕೆ ತಲುಪಲು ಸಿಬ್ಬಂದಿಗೆ  ಅಸಾಧ್ಯವಾಯಿತು. ಒಂದು ವೇಳೆ ಮುದ್ರಿಸಿದ್ದರೂ ನಗರದಲ್ಲಿ ಪತ್ರಿಕೆ ಹಂಚಲು ಸಾಧ್ಯವಿರಲಿಲ್ಲ ಎಂದು ಮುರಳಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT