ಸಿಎಂ ಸಿದ್ದರಾಮಯ್ಯ ಮತ್ತು ಬಾಲಿವುಡ್ ಗಣ್ಯರು (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಚೆನ್ನೈ ಪ್ರವಾಹ: ಕರ್ನಾಟಕದಿಂದ ರು.5 ಕೋಟಿ ನೆರವು

ಸತತ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ತಮಿಳುನಾಡಿಗೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಕ್ಷಣಕ್ಕೆ ರು.5 ಕೋಟಿ ನೆರವು ನೀಡಲಾಗಿದೆ...

ನವದೆಹಲಿ: ಸತತ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ತಮಿಳುನಾಡಿಗೆ ರಾಜ್ಯ ಸರ್ಕಾರ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ತಕ್ಷಣಕ್ಕೆ ರು.5 ಕೋಟಿ ನೆರವು  ನೀಡಲಾಗಿದೆ.

ಸಾರಿಗೆ, ಔಷಧ, ಆಹಾರ ಸೇರಿದಂತೆ ಯಾವುದೇ ರೀತಿಯ ನೆರವು ಬೇಕಾದರೂ ನೀಡಲು ರಾಜ್ಯ ಸಿದ್ಧವಿದೆ. ಈ ಸಂಬಂಧ ತಮಿಳುನಾಡು ಮುಖ್ಯ ಕಾರ್ಯದರ್ಶಿ ಜತೆಗೆ ಮಾತುಕತೆ ನಡೆಸಲು  ರಾಜ್ಯದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಮಿಡಿದ ಸೆಲೆಬ್ರಿಟಿಗಳು
ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್ ಬಚ್ಚನ್, ರಿಷಿ ಕಪೂರ್, ಫರ್ಹಾನ್ ಅಖ್ತರ್ ಮುಂತಾದವರು ಚೆನ್ನೈ ಮಳೆ ಸಂತ್ರಸ್ತರಿಗಾಗಿ ಮಿಡಿದಿದ್ದಾರೆ. ಚೆನ್ನೈ ಮಳೆಯಲ್ಲಿ ಸಿಕ್ಕಿಕೊಂಡವರಿಗಾಗಿ  ಅಮಿತಾಭ್ ಬಚ್ಚನ್ ಟ್ವಿಟ್ಟರ್‍ನಲ್ಲಿ ಪ್ರಾರ್ಥನೆ ಸಲ್ಲಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾದವರಿಗೆ ಹೃದಯಪೂರ್ವಕ ಸಹಾಯ ಸೂಚಿಸಿದ್ದಾರೆ. ರಿಷಿಕಪೂರ್ ಹೆಲ್ಪ್‍ಲೈನ್ ಸಂಖ್ಯೆಗಳನ್ನು  ಟ್ವಿಟ್ ಮಾಡಿದ್ದಾರೆ. ಅಭಿಷೇಕ್ ಬಚ್ಚನ್, ಪರಿಣೀತಿ ಚೋಪ್ರಾ ಮುಂತಾದವರು ಸಂತ್ರಸ್ತರಿಗೆ ನೆರವಾಗುವಂತೆ ಜನತೆಗೆ ಕಳಕಳಿಯ ಮನವಿ ಮಾಡಿದ್ದಾರೆ. ರವೀನಾ ಟಂಡನ್, ದಿಯಾ ಮಿರ್ಜಾ  ಮುಂತಾದವರು ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದವರಿಗೆ ಅಭಿನಂದನೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT