ಪರಿಹಾರ ಸಾಮಗ್ರಿಗಳ ಮೇಲೆ 'ಅಮ್ಮ' ಚೀಟಿ ಅಂಟಿಸಲು ಒತ್ತಾಯ 
ಪ್ರಧಾನ ಸುದ್ದಿ

ಪರಿಹಾರ ಸಾಮಗ್ರಿಗಳ ಮೇಲೆ 'ಅಮ್ಮ' ಚೀಟಿ ಅಂಟಿಸಲು ಒತ್ತಾಯ

ತಮಿಳುನಾಡು ಪ್ರವಾಹದಿಂದ ತತ್ತರಿಸಿರುವ ಸಮಯದಲ್ಲಿ, ಸಾರ್ವಜನಿಕರ ಸಹಕಾರದಿಂದ ದೇಶದ ವಿವಿದೆಡೆಗಳಿಂದ ಪರಿಹಾರ ಸಾಮಗ್ರಿಗಳು ಚೆನ್ನೈ ಮತ್ತು ಇತರ

ಬೆಂಗಳೂರು: ತಮಿಳುನಾಡು ಪ್ರವಾಹದಿಂದ ತತ್ತರಿಸಿರುವ ಸಮಯದಲ್ಲಿ, ಸಾರ್ವಜನಿಕರ ಸಹಕಾರದಿಂದ ದೇಶದ ವಿವಿದೆಡೆಗಳಿಂದ ಪರಿಹಾರ ಸಾಮಗ್ರಿಗಳು ಚೆನ್ನೈ ಮತ್ತು ಇತರ ಪ್ರದೇಶಗಳಿಗೆ ಸರಬರಾಜಾಗುತ್ತಿರುವ ಸಮಯದಲ್ಲಿ ತುರ್ತು ಪರಿಸ್ಥಿಯನ್ನು ಲೆಕ್ಕಿಸದೆ ಕೆಲವರು ವಾಹನಗಳನ್ನು ತಡೆಗಟ್ಟಿ ಪರಿಹಾರ ಸಾಮಗ್ರಿಗಳ ಮೇಲೆ ಮುಖ್ಯಮಂತ್ರಿ ಜಯಲಲಿತಾ ಅವರ ಫೋಟೊ ಅಂಟಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹಲವರು ಸಾಮಾಜಿಕ ಅಂತರ್ಜಾಲ ತಾಣಗಳಲ್ಲಿ ದೂರಿದ್ದಾರೆ. ಈ ಕಾರ್ಯಕ್ಕೆ ನಿರಾಕರಿಸಿದರೆ ಪರಿಹಾರ ಸಾಮಗ್ರಿಗಳನ್ನು ಒಳಗೆ ಹೋಗಲು ಬಿಡುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.  

ಹೀಗೆ ದೂರಿರುವ ಹಲವಾರು ಜನರಲ್ಲಿ ವಿನೋದ್ ದ್ವಾರ್ಕಾನಿ ಎಂಬುವವರು ಫೇಸ್ಬುಕ್ ನಲ್ಲಿ ಬರೆದುಕೊಂಡಿರುವುದು ಹೀಗೆ.

"ಕೊಯಂಬತ್ತೂರಿನಿಂದ ಬರುತ್ತಿದ್ದ ೬ ಟ್ರಕ್ಕುಗಳನ್ನು ಶ್ರೀಪೆರಂಬುದೂರಿನಲ್ಲಿ ತಡೆದು ನಿಲ್ಲಿಸಲಾಯಿತು ಮತ್ತು ಎಲ್ಲ ಪರಿಹಾರ ಸಾಮಗ್ರಿಗಳ ಚೀಲದ ಮೇಲೆ ಅಮ್ಮ ಚೀಟಿಗಳನ್ನು ಅಂಟಿಸಲಾಯಿತು.

"ಇದು ನನಗೆ ಇನ್ನಿಲ್ಲದ ಕೋಪ ತರಿಸಿದೆ. ಕಡಲೂರಿಗೆ ತೆರಳಿನ್ನ ನನ್ನ ಗೆಳೆಯರನ್ನು ಹಲವಾರು ಗೂಂಡಾಗಳು ತಡೆದು ಪರಿಹಾರ ಸಾಮಗ್ರಿಗಳ ಮೇಲೆ ಅಮ್ಮ ಸ್ಟಿಕರ್ ಅಂಟಿಸಿದ್ದಾರೆ. ಇದು ನಾಚಿಕೆಗೇಡಿನ ರಾಜಕೀಯ. ಇದರ ಬಗ್ಗೆ ಮಾತನಾಡುವುದಕ್ಕೂ ನಾಚಿಕೆಯಾಗುತ್ತಿದೆ. ಆದರೆ ಒಳಗೆ ಸಿಕ್ಕಿಹಾಕಿಕೊಂಡಿರುವ ಜನ ಇದೆಲ್ಲಾ ಅಮ್ಮನ ಕೆಲಸ ಎಂದು ಕುರುಡಾಗಿ ನಂಬುತ್ತಾರೆ." ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT