ನೀರಿನಿಂದ ತುಂಬಿರುವ ಚೆನ್ನೈ ವಿಮಾನ ನಿಲ್ದಾಣ 
ಪ್ರಧಾನ ಸುದ್ದಿ

ಜಲಪ್ರಳಯ: ಸಹಜ ಸ್ಥಿತಿಯತ್ತ ಚೆನ್ನೈ ವಿಮಾನ ನಿಲ್ದಾಣ

ಕುಂಭದ್ರೋಣ ಮಳೆಯಿಂದ ಅಕ್ಷರ ಸಹ ಕೆರೆಯಂತಾಗಿದ್ದ ಚೆನ್ನೈ ವಿಮಾನ ನಿಲ್ದಾಣ ನಿಧಾನವಾಗಿ ಚೆತರಿಸಿಕೊಳ್ಳುತ್ತಿದ್ದು, ಶೀಘ್ರವೇ ವಾಣಿಜ್ಯ ವಿಮಾನಗಳ...

ನವದೆಹಲಿ: ಕುಂಭದ್ರೋಣ ಮಳೆಯಿಂದ ಅಕ್ಷರ ಸಹ ಕೆರೆಯಂತಾಗಿದ್ದ ಚೆನ್ನೈ ವಿಮಾನ ನಿಲ್ದಾಣ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಶೀಘ್ರವೇ ವಾಣಿಜ್ಯ ವಿಮಾನಗಳ ಹಾರಾಟ ಆರಂಭವಾಗಲಿದೆ ಎಂದು ಕೇಂದ್ರ ವಿಮಾನಯಾನ ಖಾತೆ ರಾಜ್ಯ ಸಚಿವ ಮಹೇಶ ಶರ್ಮಾ ಅವರು ಶನಿವಾರ ಹೇಳಿದ್ದಾರೆ.

'ನಾವು ಈಗಾಗಲೇ ತಾಂತ್ರಿಕ ವಿಮಾನ ಹಾರಾಟವನ್ನು ಆರಂಭಿಸಿದ್ದೇವೆ. ಆದರೆ ಕೆಳಮಹಡಿಯಲ್ಲಿ ಇನ್ನೂ ನೀರು ತುಂಬಿಕೊಂಡಿದ್ದರಿಂದ ಮತ್ತು ಟರ್ಮಿನಲ್ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಇನ್ನೂ ವಾಣಿಜ್ಯ ವಿಮಾನ ಹಾರಾಟ ಆರಂಭಿಸಿಲ್ಲ' ಎಂದು ಅವರು ತಿಳಿಸಿದರು.

ಇನ್ನು ಎರಡ್ಮೂರು ದಿನದಲ್ಲಿ ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣ ಸಹಜ ಸ್ಥಿತಿಗೆ ಬರಲಿದೆ. ಈಗ ಐಎನ್‌ಎಸ್ ರಜಲಿ ವಾಯು ನೆಲೆಯಿಂದ ನಾಲ್ಕು ವಾಣಿಜ್ಯ ವಿಮಾನಗಳು ಸಂಚಾರ ನಡೆಸುತ್ತಿವೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಶತಮಾನದ ಮಹಾಮಳೆಯಿಂದಾಗಿ ಕಳೆದ ಭಾನುವಾರದಿಂದ ಚೆನ್ನೈ ವಿಮಾನ ನಿಲ್ದಾಣದ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT