ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ 
ಪ್ರಧಾನ ಸುದ್ದಿ

ದಲಿತರಿಗಾಗಿ 1.5 ಕೋಟಿ ಮನೆ ನಿರ್ಮಿಸಲು ಯೋಜನೆ

ರಾಜ್ಯದಲ್ಲಿ ದಲಿತರಿಗಾಗಿ 1.5 ಲಕ್ಷ ಮನೆಗಳನ್ನು ನಿರ್ಮಿಸಿಕೊಡುವ ಯೋಜನೆ ರೂಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಹೇಳಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ ದಲಿತರಿಗಾಗಿ 1.5 ಲಕ್ಷ ಮನೆಗಳನ್ನು ನಿರ್ಮಿಸಿಕೊಡುವ ಯೋಜನೆ ರೂಪಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

ರಾಜ್ಯದಲ್ಲಿ ದಲಿತ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಪಣ ತೊಟ್ಟಿದ್ದು, ಅವರಿಗಾಗಿ ಮೀಸಲಿಟ್ಟ ಹಣ ದುರುಪಯೋಗದಂತೆ ಎಚ್ಚರವಹಿಸಲಾಗುವುದು. ಈ ವರ್ಷದ ಬಜೆಟ್‍ನಲ್ಲಿ  ಮೀಸಲಿಟ್ಟ ಅನುದಾನ ಬಳಕೆಯಾಗದಿದ್ದರೆ ಮುಂದಿನ ವರ್ಷದಲ್ಲಿ ಬಳಸಿಕೊಳ್ಳುವ ಅವಕಾಶವಿದೆ ಎಂದು ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ ಅವರ ಜನ್ಮ ದಿನದ 125ನೇ ವರ್ಷಾಚರಣೆ  ಅಂಗವಾಗಿ ದಲಿತ ಹಕ್ಕುಗಳ ಸಮಿತಿ ವತಿಯಿಂದ ಶನಿವಾರ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಿದ್ದ ದಲಿತರ ರಾಜ್ಯ ಸಮಾವೇಶದಲ್ಲಿ ಮಾತನಾಡಿದರು. ಸಮಾಜದಲ್ಲಿ ಜೀವಂತವಾಗಿರುವ  ಜಾತಿ ಪದ್ಧತಿ, ಅಷ್ಟು ಸುಲಭವಾಗಿ ಹೋಗುವುದಿಲ್ಲ. ಮೇಲ್ವರ್ಗದವರ ಮನಸ್ಸು ಪರಿವರ್ತನೆಯಾದರೆ ಇದಕ್ಕೆ ಮುಕ್ತಿ. ರಾಜ್ಯ ಸರ್ಕಾರ ದಲಿತರನ್ನು ಆರ್ಥಿಕವಾಗಿ ಸಬಲರಾಗಿಸಲು ಬದ್ಧವಾಗಿದೆ.  ದೇವದಾಸಿಯರಿಗೆ ನೀಡುತ್ತಿದ್ದ ಮಾಸಾಶನವನ್ನು ರು.500 ರಿಂದ ರು.1000 ರು.ಗೆ ಹೆಚ್ಚಿಸಿದೆ.

ಮೇಲ್ಜಾತಿ ಹುಡುಗ ದಲಿತ ಹುಡುಗಿಯನ್ನು ವಿವಾಹವಾದರೆ 3 ಲಕ್ಷ, ದಲಿತ ಹುಡುಗ ಮೇಲ್ಜಾತಿ ಹುಡುಗಿ ಮದುವೆಯಾದರೆ ರು.2 ಲಕ್ಷ, ಸರಳ ವಿವಾಹಕ್ಕೆ ರು.50 ಸಾವಿರ ಪ್ರೋತ್ಸಾಹ ಧನ  ನೀಡಲಾಗುತ್ತಿದೆ. ದೌರ್ಜನ್ಯಕ್ಕೆ ಒಳಗಾದವರಿಗೆ ಉದ್ಯೋಗ, ಭೂಮಿ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘವಲು, ಸಿಪಿಐ(ಎಂ) ಪಾಲಿಟ್ ಬ್ಯೂರೋ ರಾಜ್ಯ ಕಾರ್ಯದರ್ಶಿ ಬಿ.ವಿ.ಶ್ರೀರಾಮರೆಡ್ಡಿ ಮಾತನಾಡಿದರು.

ಸಮಸ್ಯೆ ಸುರಿಮಳೆ ಸಚಿವರು ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಸಮಯದಲ್ಲೇ ಅನೇಕ ಜನರು ಸಚಿವರಿಗೆ ಸಮಸ್ಯೆಗಳ ಸುರಿಮಳೆಗೈದರು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ ಜನರು  ತಮ್ಮ ಗ್ರಾಮಗಳಲ್ಲಿ ನಡೆಯುತ್ತಿರುವ ಅನ್ಯಾಯ ಸರಿಪಡಿಸುವಂತೆ ಕೋರಿದರು. ಆಗ ಕೆಲಕಾಲ ಗದ್ದಲ ಉಂಟಾಯಿತು. ಕೂಡಲೇ ಎಚ್ಚೆತ್ತ ಕಾರ್ಯಕ್ರಮ ಆಯೋಜಕರು ಎಲ್ಲರನ್ನು ವೇದಿಕೆಯಿಂದ  ಕೆಳಗಿಳಿಸಿದರು. ನಂತರ ಮಾತನಾಡಿದ ಸಚಿವರು, ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿರುವುದಲ್ಲಿ ಏನು ತಪ್ಪಿಲ್ಲ. ನಿಮ್ಮಂತೆ ನಾನು ನೋವು ಅನುಭವಿಸಿದವನು. ನಿಮ್ಮ ಕಣ್ಣೀರು ಒರೆಸಲು ಸದಾ  ಸಿದ್ಧನಿದ್ದೇನೆ ಎಂದು ಭರವಸೆ ನೀಡಿದರು.

ದಲಿತ ಪರ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಾಗಿದ್ದರೆ, ನನ್ನ ಗಮನಕ್ಕೆ ತನ್ನಿ. ಹಿಂಪಡಯಲು ಕ್ರಮ ಕೈಗೊಳ್ಳಲಾಗುವುದು. ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿ ಅವರ  ಕೈಗಳನ್ನು ಕಟ್ಟಿಹಾಕಬಾರದು.
-ಎಚ್ ಆಂಜನೇಯ, ಸಮಾಜ ಕಲ್ಯಾಣ ಸಚಿವ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT