ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಮೋದಿ ವಿರುದ್ದ ಲಷ್ಕರ್ ದಾಳಿ ಸಂಚು ವಿಫಲಗೊಳಿಸಿದ ಗುಪ್ತಚರ ಇಲಾಖೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದಾಳಿ ನಡೆಸಲು ಉಗ್ರ ಸಂಘಟನೆಯಾದ ಲಷ್ಕರೆ ತೊಯ್ಬಾ ಸಂಚು ಹೂಡಿತ್ತು. ಆದರೆ ಈ ಸಂಚನ್ನು ಗುಪ್ತಚರ ಇಲಾಖೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದಾಳಿ ನಡೆಸಲು ಉಗ್ರ ಸಂಘಟನೆಯಾದ ಲಷ್ಕರೆ ತೊಯ್ಬಾ ಸಂಚು ಹೂಡಿತ್ತು. ಆದರೆ ಈ ಸಂಚನ್ನು ಗುಪ್ತಚರ ಇಲಾಖೆ ವಿಫಲಗೊಳಿಸಿದೆ ಎಂದು ಸುದ್ದಿಮೂಲಗಳಿಂದ ತಿಳಿದು ಬಂದಿದೆ.
ಮೋದಿ ಸೇರಿದಂತೆ ಹಲವು ಗಣ್ಯರ ಮೇಲೆ ದಾಳಿ ಮಾಡಲು ಲಷ್ಕರೆ ತೊಯ್ಬಾ ಸಂಚು ಹೂಡಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಮೋದಿಯವರು ಭಾಗವಹಿಸುವ  ಕಾರ್ಯಕ್ರಮಗಳಲ್ಲಿ 26/11 ರ ರೀತಿಯಲ್ಲಿ ದಾಳಿ ನಡೆಸಲು ಉಗ್ರರು ಯೋಜನೆ ರೂಪಿಸಿದ್ದರು ಎನ್ನಲಾಗುತ್ತಿದೆ.
ದೇಶದ ರಾಜಧಾನಿಯಲ್ಲಿ ಗಣ್ಯರಿಗೆ ಗುರಿಯಿಟ್ಟು ಉಗ್ರ ಕೃತ್ಯಗಳನ್ನು ನಡೆಸಲು 4 ಉಗ್ರರು ಭಾರತಕ್ಕೆ ನುಸುಳಿದ್ದಾರೆ ಎಂದು ದೆಹಲಿ ಪೊಲೀಸ್ ವಿಶೇಷ ಪಡೆ ಈ ಹಿಂದೆಯೇ ಮುನ್ನೆಚ್ಚರಿಕೆ ನೀಡಿತ್ತು.  ಕಳೆದ ತಿಂಗಳು ಈ ಉಗ್ರರು ಭಾರತದೊಳಗೆ ನುಸುಳಿದ್ದರು. ಲಷ್ಕರೆ ಕಮಾಂಡರ್ ಅಬು ದುಜನ್ ಜತೆ ಇವರು ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ದುಜನ್, ಉಕಾಕ್ಷ ಎಂಬ ಹೆಸರಿರುವ ಇವರನ್ನು ಪತ್ತೆ ಹಚ್ಚುವ ಕ್ರಿಯೆ ಬಿರುಸಿನಿಂದ ಸಾಗಿದೆ. 
ಅದೇ ವೇಳೆ ಡಿ. 6 ರಂದು ಬಾಬರಿ ಮಸೀದಿ ಧ್ವಂಸ ನಡೆದ ದಿನವಾಗಿರುವುದರಿಂದ ದೆಹಲಿಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ