ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಮೋದಿ ವಿರುದ್ದ ಲಷ್ಕರ್ ದಾಳಿ ಸಂಚು ವಿಫಲಗೊಳಿಸಿದ ಗುಪ್ತಚರ ಇಲಾಖೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದಾಳಿ ನಡೆಸಲು ಉಗ್ರ ಸಂಘಟನೆಯಾದ ಲಷ್ಕರೆ ತೊಯ್ಬಾ ಸಂಚು ಹೂಡಿತ್ತು. ಆದರೆ ಈ ಸಂಚನ್ನು ಗುಪ್ತಚರ ಇಲಾಖೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದಾಳಿ ನಡೆಸಲು ಉಗ್ರ ಸಂಘಟನೆಯಾದ ಲಷ್ಕರೆ ತೊಯ್ಬಾ ಸಂಚು ಹೂಡಿತ್ತು. ಆದರೆ ಈ ಸಂಚನ್ನು ಗುಪ್ತಚರ ಇಲಾಖೆ ವಿಫಲಗೊಳಿಸಿದೆ ಎಂದು ಸುದ್ದಿಮೂಲಗಳಿಂದ ತಿಳಿದು ಬಂದಿದೆ.
ಮೋದಿ ಸೇರಿದಂತೆ ಹಲವು ಗಣ್ಯರ ಮೇಲೆ ದಾಳಿ ಮಾಡಲು ಲಷ್ಕರೆ ತೊಯ್ಬಾ ಸಂಚು ಹೂಡಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಮೋದಿಯವರು ಭಾಗವಹಿಸುವ  ಕಾರ್ಯಕ್ರಮಗಳಲ್ಲಿ 26/11 ರ ರೀತಿಯಲ್ಲಿ ದಾಳಿ ನಡೆಸಲು ಉಗ್ರರು ಯೋಜನೆ ರೂಪಿಸಿದ್ದರು ಎನ್ನಲಾಗುತ್ತಿದೆ.
ದೇಶದ ರಾಜಧಾನಿಯಲ್ಲಿ ಗಣ್ಯರಿಗೆ ಗುರಿಯಿಟ್ಟು ಉಗ್ರ ಕೃತ್ಯಗಳನ್ನು ನಡೆಸಲು 4 ಉಗ್ರರು ಭಾರತಕ್ಕೆ ನುಸುಳಿದ್ದಾರೆ ಎಂದು ದೆಹಲಿ ಪೊಲೀಸ್ ವಿಶೇಷ ಪಡೆ ಈ ಹಿಂದೆಯೇ ಮುನ್ನೆಚ್ಚರಿಕೆ ನೀಡಿತ್ತು.  ಕಳೆದ ತಿಂಗಳು ಈ ಉಗ್ರರು ಭಾರತದೊಳಗೆ ನುಸುಳಿದ್ದರು. ಲಷ್ಕರೆ ಕಮಾಂಡರ್ ಅಬು ದುಜನ್ ಜತೆ ಇವರು ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ದುಜನ್, ಉಕಾಕ್ಷ ಎಂಬ ಹೆಸರಿರುವ ಇವರನ್ನು ಪತ್ತೆ ಹಚ್ಚುವ ಕ್ರಿಯೆ ಬಿರುಸಿನಿಂದ ಸಾಗಿದೆ. 
ಅದೇ ವೇಳೆ ಡಿ. 6 ರಂದು ಬಾಬರಿ ಮಸೀದಿ ಧ್ವಂಸ ನಡೆದ ದಿನವಾಗಿರುವುದರಿಂದ ದೆಹಲಿಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT