ಜಲಪ್ರಳಯಕ್ಕೆ ತುತ್ತಾದ ಚೆನ್ನೈ ಮಹಾನಗರ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಜಲ ಪ್ರಳಯ: ಸಹಜ ಸ್ಥಿತಿಯತ್ತ ಚೆನ್ನೈ ಜನಜೀವನ

ಕುಂಭದ್ರೋಣ ಮಳೆಯಿಂದ ಉಂಟಾದ ಜಲಪ್ರಳಯದಿಂದ್ದ ತತ್ತರಿಸಿದ್ದ ಚೆನ್ನೈ ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.

ಚೆನ್ನೈ: ಕುಂಭದ್ರೋಣ ಮಳೆಯಿಂದ ಉಂಟಾದ ಜಲಪ್ರಳಯದಿಂದ್ದ ತತ್ತರಿಸಿದ್ದ ಚೆನ್ನೈ ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಸೋಮವಾರ ನಗರದಲ್ಲಿ ಕೆಲವು ಅಂಗಡಿ ಮುಂಗಟ್ಟಗಳು ಆರಂಭವಾಗಿದ್ದು, ಕೆಲವು ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ತಿವ್ರಗತಿಯಲ್ಲಿ ನಡೆಯುತ್ತಿದೆ.

ಕಳೆದ ಕೆಲವು ದಿನಗಳಿಂದ ಸಂಪೂರ್ಣ ಸ್ಥಿಗಿತಗೊಂಡಿದ್ದ ಆಟೋ ರಿಕ್ಷಾ ಸಂಚಾರ ಹಾಗೂ ಸಾರಿಗೆ ಪುನಾರಂಭಗೊಂಡಿವೆ. ಆದರೂ ಜನರ ಜೀವನಮಟ್ಟ ಇನ್ನೂ ಸಂಪೂರ್ಣ ಸುಧಾರಿಸಿಲ್ಲ. ಶಾಲಾ, ಕಾಲೇಜ್‌ಗಳು ಇನ್ನೂ ಆರಂಭವಾಗಿಲ್ಲ.

ರೈಲು ಸಂಚಾರ ಹಾಗೂ ವಿಮಾನ ಸಂಚಾರವೂ ಆರಂಭವಾಗಿದ್ದು, ಚೆನ್ನೈ ಮಹಾನಗರದಲ್ಲಿ ಸಂಪರ್ಕ ವ್ಯವಸ್ಥೆ ಸಹ ಸಹಜ ಸ್ಥಿತಿಗೆ ಮರಳುತ್ತಿದೆ.

ಚೆನ್ನೈಯಲ್ಲಿ ಮಳೆ ಸಂಪೂರ್ಣ ಸ್ಥಿಗಿತಗೊಂಡಿದೆ. ಆದರೆ ತಿರುವರೂರು, ನಾಗಪಟ್ಟಣಂ ಹಾಗೂ ಕೂಡ್ಡಲೊರ್ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಇನ್ನೂ ಮಳೆಯಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT