ಸಿಎಂ ಸಿದ್ದರಾಮಯ್ಯ 
ಪ್ರಧಾನ ಸುದ್ದಿ

ಉಪ ಲೋಕಾಯುಕ್ತ ಹುದ್ದೆಗೆ ನ್ಯಾ.ಆನಂದ್ ಹೆಸರು ಶಿಫಾರಸು ಮಾಡಲು ನಿರ್ಧಾರ

ಉಪ ಲೋಕಾಯುಕ್ತರ ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆನಂದ್ ಅವರನ್ನು ಹೆಸರನ್ನು ಶಿಫಾರಸು ಮಾಡಲು ಉಪ...

ಬೆಂಗಳೂರು: ಉಪ ಲೋಕಾಯುಕ್ತರ ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆನಂದ್ ಅವರನ್ನು ಹೆಸರನ್ನು ಶಿಫಾರಸು ಮಾಡಲು ಉಪ ಲೋಕಾಯುಕ್ತ ನೇಮಕಾತಿ ಸಮಿತಿ ಸಭೆ ನಿರ್ಧರಿಸಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಮಿತಿ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾ.ಆನಂದ್ ಅವರ ಹೆಸರನ್ನು ಉಪ ಲೋಕಾಯುಕ್ತ ಹುದ್ದೆಗೆ ಶಿಫಾರಸು ಮಾಡಲು ಸರ್ವಾನುಮತದಿಂದ ನಿರ್ಧಾರಿಸಲಾಗಿದೆ ಎಂದು ಸಭೆಯ ನಂತರ ಸಿಎಂ ತಿಳಿಸಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರ ಉಪ ಲೋಕಾಯುಕ್ತ ಹುದ್ದೆ ನ್ಯಾ.ಮಂಜುನಾಥ್ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಆದರೆ ರಾಜ್ಯಪಾಲರು ಮಂಜುನಾಥ್ ಅವರನ್ನು ಹೆಸರನ್ನು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಈಗ ಹೊಸದಾಗಿ ಆನಂದ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲಿದೆ.

ಸಭೆಯಲ್ಲಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT