ಸಲ್ಮಾನ್ ಖಾನ್ 
ಪ್ರಧಾನ ಸುದ್ದಿ

ಸಲ್ಮಾನ್ ಅಪರಾಧ ಸಾಬೀತು ಮಾಡಲು ಕಾನೂನು ವಿಫಲ?

ಗುದ್ದೋಡು ಪ್ರಕರಣದ ಆರೋಪಿ ಬಾಲಿವುಡ್ ನಟ ಸಲ್ಮಾನ್‍ಖಾನ್ ಪಾಲಿಗೆ ಕೊಂಚ ನಿರಾಳ ಒದಗುವ ಸೂಚನೆ...

ಮುಂಬೈ: ಗುದ್ದೋಡು ಪ್ರಕರಣದ ಆರೋಪಿ ಬಾಲಿವುಡ್ ನಟ ಸಲ್ಮಾನ್‍ಖಾನ್ ಪಾಲಿಗೆ ಕೊಂಚ ನಿರಾಳ ಒದಗುವ ಸೂಚನೆ ಸಿಕ್ಕಿದೆ. 
ಸಲ್ಮಾನ್‍ಖಾನ್ ಮದ್ಯಪಾನ ಮಾಡಿದ್ದನ್ನು ಹಾಗೂ ಕುಡಿದು ವಾಹನ ಚಾಲನೆ ಮಾಡಿದ್ದನ್ನು ಸಾಬೀತು ಪಡಿಸಲು ಬೇಕಾಗಿರುವ ಬಲವಾದ ಸಾಕ್ಷಿಗಳು ಇಲ್ಲದಿರುವುದನ್ನು ವಿಚಾರಣೆಯ ಸಮಯದಲ್ಲಿ ಎಂದು ಮುಂಬೈ ಹೈಕೋರ್ಟ್ ಗಮನಿಸಿರುವುದರಿಂದ ಗುರುವಾರ ಹೊರಬರಲಿರುವ ತೀರ್ಪಿನ ಬಗ್ಗೆ ಕುತೂಹಲ ಹೆಚ್ಚಾಗಿದೆ. 
ಸತತ ಮೂರನೇ ದಿನಕ್ಕೆ ಕಾಲಿಟ್ಟ ಸಲ್ಮಾನ್ ಖಾನ್ ಮನವಿ ಅರ್ಜಿಯ ವಿಚಾರಣೆ ಗುರುವಾರ ಕೊನೆಗೊಳ್ಳಲಿದ್ದು, ಸಲ್ಮಾನ್ ಹಣೆಬರಹ ಸಂಜೆಯ ಹೊತ್ತಿಗೆ ನಿರ್ಧಾರವಾಗಲಿದೆ. 2002ರ ಈ ಪ್ರಕರಣದಲ್ಲಿ ಐದುವರ್ಷ ಜೈಲುಶಿಕ್ಷೆಯ ವಿರುದ್ಧ ಸಲ್ಮಾನ್ ಸಲ್ಲಿಸಿರುವ ಮನವಿ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾ.ಎ .ಆರ್ ಜೋಷಿ, ಪ್ರತ್ಯಕ್ಷ ಸಾಕ್ಷಿ ರವೀಂದ್ರ ಪಾಟೀಲ್ ರ ಹೇಳಿಕೆಗಳ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ. 
ಮೂಲ ಎಫ್ ಐಆರ್‍ಗೂ ನಂತರದ ಹೇಳಿಕೆಗಳಿಗೂ ವ್ಯತ್ಯಾಸವಿದೆ ಎಂದಿದ್ದಾರೆ. ಏತನ್ಮಧ್ಯೆ ಅಂದು ಕಾರ್‍ನಲ್ಲಿದ್ದ ಗಾಯಕ ಕಮಾಲ್ ಖಾನ್ ರನ್ನೂ ಪರೀಕ್ಷೆಗೆ ಒಳಪಡಿಸಬೇಕಿತ್ತೆಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT